ನಟಿ ಅನುಗೌಡ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಶಿವಮೊಗ್ಗ: ಜಮೀನು ವಿವಾದ ಸಂಬಂಧ ಕಿರುತೆರೆ ಮತ್ತು ಚಲನಚಿತ್ರ ನಟಿ ಅನುಗೌಡ ಅವರ ಮೇಲೆ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾ‌ಲೂಕಿನ ಉಳ್ಳೂರು ಗ್ರಾಮ ಪಂಚಾಯತ ವ್ಯಾಪ್ತಿಯ ಕಾಸ್ಪಾಡಿಯಲ್ಲಿ ನಟಿ ಅನೂಗೌಡ ಅವರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಜಮೀನಿನ ವಿವಾದದ ಕಾರಣ ಸ್ಥಳೀಯ ನಿವಾಸಿಗಳಾದ ನೀಲಮ್ಮ ಮತ್ತು ಮೋಹನ ಎಂಬವರು ತಮ್ಮ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಅವರು ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಮೀನು ವಿವಾದ ವಿಚಾರಕ್ಕೆ ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಕಾಸ್ಪಡಿಯಲ್ಲಿರುವ ಜಮೀನನ್ನು ಅನುಗೌಡ ಅವರ ತಂದೆ-ತಾಯಿ ನೋಡಿಕೊಳ್ಳುತ್ತಿದ್ದು, ಅನುಗೌಡ ಆಗಾಗ ಬೆಂಗಳೂರಿನಿಂದ ಬಂದು ಹೋಗುತ್ತಿದ್ದರು ಎಂದು ಹೇಳಲಾಗಿದೆ.
ಅನು ಗೌಡ ಕನ್ನಡದಲ್ಲಿ ಸವಿಸವಿ ನೆನಪು, ಭೂಗತ, ಸ್ಕೂಲ್ ಮಾಸ್ಟರ್,ಕೆಂಪೇಗೌಡ, ದಂಡಂ ದಶಗುಣಂ, ಸುಗ್ರೀವ, ಮೊದಲಾದ ಸಿನೆಮಾಗಳಲ್ಲಿ ನಟಿಸಿದ್ದಾರೆ. ತಮಿಳಿನಲ್ಲಿಯೂ ನಟಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement