ಕಾಶ್ಮೀರ: ಉತ್ತರ ಕಾಶ್ಮೀರದ ಬಿಜೆಪಿ ಮುಖಂಡ ಅನ್ವರ್ ಖಾನ್ ನಿವಾಸದ ಮೇಲೆ ಭಯೋತ್ಪಾದಕರ ಗುಂಪು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾನೆ.
ಬಿಜೆಪಿ ಉತ್ತರ ಕಾಶ್ಮೀರ ಅಭಿಯಾನದ ನೇತೃತ್ವ ವಹಿಸಿದ್ದ ಅನ್ವರ್ ಖಾನ್ ನಿವಾಸದ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಅವರು ಮನೆಯಲ್ಲಿರಲಿಲ್ಲ. ಅನ್ವರ್ ಖಾನ್ ಬಾರಾಮುಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದು, ಕುಪ್ವಾರಾ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡಿದ್ದಾರೆ. ದಾಳಿ ನಡೆಸಿದ ಭಯೋತ್ಪಾದಕರ ಶೋಧ ಕಾರ್ಯ ನಡೆದಿದೆ.
ಬಿಜೆಪಿ ನಾಯಕನ ಮೇಲೆ ಹಲ್ಲೆ ನಡೆದಿರುವುದು ಇದೇ ಮೊದಲಲ್ಲ. ಇದಕ್ಕೂ ಮುನ್ನ 2018 ರಲ್ಲಿ ಪುಲ್ವಾಮಾ ಜಿಲ್ಲೆಯ ಅನ್ವರ್ ಖಾನ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು, ಅಲ್ಲಿ ಕಾವಲಿದ್ದ ಪೊಲೀಸ್ ಅಧಿಕಾರಿ ದಾಳಿಯಲ್ಲಿ ಗಾಯಗೊಂಡಿದ್ದರು. ಆಗ ಕೂಡ ಖಾನ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ