ಲಾರಿಗೆ ಅಪ್ಪಳಿಸಿದ ಕಾರು : ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಬಡಿದ ಕಾರು ನಂತರ ಲಾರಿಗೆ ಅಪ್ಪಳಿಸಿ ಸಂಭವಿಸಿದ ಅಪಘಾತ ಚಿತ್ರದುರ್ಗದ ಹೊರವಲಯದಲ್ಲಿ ನಡೆದ ಬಗ್ಗೆ ವರದಿಯಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಚಿತ್ರದುರ್ಗದ ಹೊರವಲಯದ ಸೀಬಾರ ಬಳಿ ಈ ಅಪಘಾತ ಸಂಭವಿಸಿದ್ದು, ಇನ್ನೊವಾ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಬಳಿಕ ಲಾರಿಗೆ ಅಪ್ಪಳಿಸಿ ಇಬ್ಬರು ಮಹಿಳೆಯರು ಹಾಗೂ ಪುರುಷ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕಾರು ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದು, ಲಾರಿ ಬೆಂಗಳೂರು ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ.
ಅಪಘಾತ ರಾತ್ರಿ ಶುಕ್ರವಾರ 9:30ರ ಸುಮಾರಿಗೆ ಸಂಭವಿಸಿದ್ದು, ಲಾರಿಯಲ್ಲಿದ್ದ ಒಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರು ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರು ಹಾಗೂ ಗಾಯಗೊಂಡವರ ಬಗ್ಗೆ ಮಾಹಿತಿ ತಿಳಿದುಬರಬೇಕಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಾಹಿತಿ ದೊಡ್ಡರಂಗೇಗೌಡರ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

ನಿಮ್ಮ ಕಾಮೆಂಟ್ ಬರೆಯಿರಿ

advertisement