ಸುಲ್ತಾನಪುರ ಸಂಸದ ನಿಶಾದ್‌ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ಮೇನಕಾ ಗಾಂಧಿ

ಲಕ್ನೋ : ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಸುಲ್ತಾನಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಸಮಾಜವಾದಿ ಪಕ್ಷದ ಸಂಸದ ರಾಮ ಭುವಲ್‌ ನಿಶಾದ್‌ ಅವರ ಆಯ್ಕೆ ಸಿಂಧುತ್ವ ಪ್ರಶ್ನಿಸಿ ಬಿಜೆಪಿಯ ಮಾಜಿ ಸಂಸದೆ ಮೇನಕಾ ಗಾಂಧಿ ಅಲಹಾಬಾದ್‌ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.
ನಿಶಾದ್ ವಿರುದ್ಧ 43,174 ಮತಗಳ ಅಂತರದಿಂದ ಸೋತ ಮೇನಕಾ ಗಾಂಧಿ ಅವರು ಶನಿವಾರ ನ್ಯಾಯಾಲಯದ ನೋಂದಣಿಗೆ ಚುನಾವಣಾ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯು ಜುಲೈ 30 ರಂದು ಲಕ್ನೋ ಪೀಠದ ಮುಂದೆ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ನಿಶಾದ್ ತನ್ನ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಅರ್ಜಿಯಲ್ಲಿ ಮೇನಕಾ ಗಾಂಧಿ ಆರೋಪಿಸಿದ್ದಾರೆ.

ನಿಶಾದ್ ವಿರುದ್ಧ 12 ಕ್ರಿಮಿನಲ್ ಪ್ರಕರಣಗಳು ಬಾಕಿಯಿದ್ದು, ಚುನಾವಣಾ ಅಫಿಡವಿಟ್‌ನಲ್ಲಿ ಕೇವಲ ಎಂಟು ಪ್ರಕರಣಗಳ ಬಗ್ಗೆ ಮಾತ್ರ ಮಾಹಿತಿ ನೀಡಿದ್ದಾರೆ ಎಂದು ಅರ್ಜಿ ಹೇಳಿದೆ.
ನಿಶಾದ್ ಅವರು ಗೋರಖಪುರ ಜಿಲ್ಲೆಯ ಪಿಪ್ರೈಚ್ ಪೊಲೀಸ್ ಠಾಣೆಯಲ್ಲಿ ಮತ್ತು ಬರ್ಹಲ್‌ಗಂಜ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ಇರುವ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಹೀಗಾಗಿ ನಿಶಾದ್ ಅವರ ಚುನಾವಣೆ ಆಯ್ಕೆಯನ್ನು ಪಕ್ಕಕ್ಕಿರಿಸಿ ಮೇನಕಾ ಗಾಂಧಿ ಅವರನ್ನು ಚುನಾಯಿತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಪ್ರಮುಖ ಸುದ್ದಿ :-   ತನ್ನ ಬಿಟ್ಟು ಬೇರೊಬ್ಬಳನ್ನು ಮದುವೆಯಾದ ವ್ಯಕ್ತಿ ಸಿಲುಕಿಸಲು 21 ಸಲ ಬಾಂಬ್ ಬೆದರಿಕೆ ಹಾಕಿದ್ದ ಮಹಿಳಾ ರೊಬೊಟಿಕ್ಸ್ ಎಂಜಿನಿಯರ್ ಬಂಧನ...!

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement