ರಾಷ್ಟ್ರಪತಿ ಚುನಾವಣೆ :  ಕರ್ನಾಟಕಕ್ಕೆ ಬಂದ ಅಭ್ಯರ್ಥಿ ಯಶವಂತ ಸಿನ್ಹಾ 

ಬೆಂಗಳೂರು: ಎನ್‌ಡಿಎ ಹೊರತಾದ ಪಕ್ಷಗಳ ಬೆಂಬಲಿತ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ಯಶವಂತ ಸಿನ್ಹಾ ಅವರು ಕರ್ನಾಟಕದ ಸಂಸದರು ಮತ್ತು ಶಾಸಕರನ್ನು ಭೇಟಿ ಮಾಡಲು ಶನಿವಾರ ಸಂಜೆ ಬೆಂಗಳೂರಿಗೆ ಬಂದಿದ್ದಾರೆ.
ಶನಿವಾರ ಬೆಳಗ್ಗೆ ಹೈದರಾಬಾದ್‌ಗೆ ಭೇಟಿ ನೀಡಿದ್ದ ಯಶವಂತ ಸಿನ್ಹಾ ಅವರನ್ನು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅಬರು ಬರಮಾಡಿಕೊಂಡರು.

ಅಲ್ಲಿ ಪ್ರಚಾರ ಕಾರ್ಯ ಕೈಗೊಂಡ ಬಳಿಕ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಬಂದ ಅವರನ್ನು ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಅವರನ್ನು ಬರಮಾಡಿಕೊಳ್ಳಲಾಯಿತು. ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಂ, ಕೆಪಿಸಿಸಿ ಉಪಾಧ್ಯಕ್ಷರಾದ ಅಶೋಕ್ ಪಟ್ಟಣ ಮೊದಲಾದವರು ಸ್ವಾಗತಿಸಿದರು.
ಜುಲೈ 3 ಭಾನುವಾರ ಬೆಳಗ್ಗೆ 11 ಗಂಟೆಗೆ ಹೋಟೆಲ್ ಶಾಂಗ್ರಿಲಾದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸಂಸದರು ಮತ್ತು ಶಾಸಕರನ್ನು ಭೇಟಿ ಮಾಡಲಿದ್ದಾರೆ. ಯಶವಂತ ಸಿನ್ಹಾ ಅವರು ಸಂಜೆ 4 ಗಂಟೆಗೆ ವಿಶೇಷ ವಿಮಾನ ಮೂಲಕ ದೆಹಲಿಗೆ ಮರಳಲಿದ್ದಾರೆ

 

ಪ್ರಮುಖ ಸುದ್ದಿ :-   ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement