ದೆಹಲಿ ಸಿಎಂ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ; ಎಎಪಿ ನಾಯಕಿ ಸ್ವಾತಿ ಮಲಿವಾಲ್ ಎಂದು ಹೇಳಿಕೊಂಡ ಮಹಿಳೆಯಿಂದ ಪೊಲೀಸರಿಗೆ 2 ಕರೆಗಳು : ಮೂಲಗಳು

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕ (ಪಿಎ) ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಿಸಿಆರ್ ಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಸೋಮವಾರ ಬೆಳಗ್ಗೆ ದೆಹಲಿ ಪೊಲೀಸರಿಗೆ ಸತತ ಎರಡು ಕರೆಗಳು ಬಂದಿದ್ದು, ಇವೆರಡೂ ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಿಂದ ಬಂದಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎಎಪಿ ನಾಯಕಿ ಸ್ವಾತಿ ಮಲಿವಾಲ್ ಎಂದುಕರೆ ಮಾಡಿದವರು ಹೇಳಿದ್ದು, ಹಲ್ಲೆಗೊಳಗಾದ ನಂತರ ತುರ್ತು ಸೇವೆಗಳಿಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ.

ದೆಹಲಿ ಪೊಲೀಸರ ಮೂಲಗಳ ಪ್ರಕಾರ, ದೆಹಲಿಯ ಮಹಿಳಾ ಆಯೋಗದ ಮಾಜಿ ಅಧ್ಯಕ್ಷರಾದ ಸ್ವಾತಿ ಮಲಿವಾಲ್‌ ಅವರನ್ನು ಕೇಜ್ರಿವಾಲ್ ಅವರ ಪಿಎ ವಿಭವಕುಮಾರ ಅವರನ್ನು ದೆಹಲಿ ಮುಖ್ಯಮಂತ್ರಿ ನಿವಾಸದೊಳಗೆ ಥಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಮಲಿವಾಲ್ ಅವರಿಂದ ಪಿಸಿಆರ್ ಕರೆ ಮಾಡಲಾಗಿದ್ದು, ನಂತರ ದೆಹಲಿ ಪೊಲೀಸರು ಮುಖ್ಯಮಂತ್ರಿ ನಿವಾಸಕ್ಕೆ ತಲುಪಿದ್ದಾರೆ.
ಆಪಾದಿತ ಘಟನೆಗೆ ಸಂಬಂಧಿಸಿದಂತೆ ಎರಡು ಕರೆಗಳನ್ನು ಸ್ವೀಕರಿಸಲಾಗಿದೆ ಎಂದು ದೆಹಲಿ ಪೊಲೀಸರ ಕಾರ್ಯಾಚರಣೆ ಕೋಶದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಬೆಳಿಗ್ಗೆ 9:40 ರ ಸುಮಾರಿಗೆ 100 [ತುರ್ತು ಪ್ರತಿಕ್ರಿಯೆ ಸಂಖ್ಯೆ] ಗೆ ಮಾಡಿದ ಮೊದಲ ಕರೆಯಲ್ಲಿ, ಕರೆ ಮಾಡಿದವರು ಹೆಸರನ್ನು ಉಲ್ಲೇಖಿಸಲಿಲ್ಲ.

ಪ್ರಮುಖ ಸುದ್ದಿ :-   ಬೆಂಗಳೂರು ಬಳಿ ಯುವತಿಗೆ ಕಿರುಕುಳ ನೀಡಿ, ಹಲ್ಲೆಗೈದ ಗ್ಯಾಂಗ್ ; ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಆದರೆ ಬೆಳಿಗ್ಗೆ 9.54 ರ ಸುಮಾರಿಗೆ ಎರಡನೇ ಕರೆಯಲ್ಲಿ … ಕರೆ ಮಾಡಿದವರು ಪೊಲೀಸರಿಗೆ ತಮ್ಮ ಹೆಸರು ಸ್ವಾತಿ ಮಲಿವಾಲ್ ಮತ್ತು ದೆಹಲಿ ಮುಖ್ಯಮಂತ್ರಿಯ ಸಹಾಯಕ ವಿಭವಕುಮಾರ ತಮ್ಮ ಮೇಲೆ ಕೈ ಮಾಡಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ವರದಿಯೊಂದು ಹೇಳಿದೆ.
ಸ್ವಾತಿ ಮಲಿವಾಲ್ ಹೆಸರಿನಲ್ಲಿ ಮಾಡಲಾದ ಎರಡು ಪಿಸಿಆರ್ ಕರೆಗಳಿಗೆ ದೆಹಲಿ ಪೊಲೀಸರು ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಭವನದಲ್ಲಿ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಮಾಹಿತಿ ಮೇರೆಗೆ ದೆಹಲಿ ಪೊಲೀಸ್ ಸಿಬ್ಬಂದಿ ಸಿಎಂ ನಿವಾಸಕ್ಕೆ ತಲುಪಿದಾಗ ಸ್ವಾತಿ ಮಲಿವಾಲ್ ಅವರು ಸಿಎಂ ನಿವಾಸದಲ್ಲಿ ಇರಲಿಲ್ಲ ಎನ್ನಲಾಗಿದೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement