ಮಹಿಳಾ ಅಧಿಕಾರಿಯ ಬೆರಳು ಕತ್ತರಿಸಿದ ಬೀದಿ ವ್ಯಾಪಾರಿ..!

ಥಾಣೆ: ಬೀದಿ ವ್ಯಾಪಾರಿಗಳ ಅತಿಕ್ರಮಣ ವಿರೋಧಿ ಅಭಿಯಾನದ ಸಮಯದಲ್ಲಿ ಬೀದ ವ್ಯಾಪಾಯೊಬ್ಬರಿ ಚಾಕು ಬೀಸಿದ ಪರಿಣಾಮ ಮಹಿಳಾ ಅಧಿಕಾರಿಯೊಬ್ಬರ ಮೂರು ಬೆರಳು ತುಂಡಾಗಿ ತಲೆಗೆ ಗಾಯವಾದ ಘಟನೆ ಮಹಾರಾಷ್ಟ್ರದಲ್ಲಿ ನೆಡದಿದೆ.
ಮಜಿವಾಡ-ಮಾನ್ಪಡಾ ಪ್ರದೇಶದಲ್ಲಿ ಕಾಸರ್ವದಾವಲಿ ಜಂಕ್ಷನ್‍ನಲ್ಲಿ ಬೀದಿ ವ್ಯಾಪಾರಿಗಳ ಅತಿಕ್ರಮಣ ತೆರವು ನೋಡಿಕೊಳ್ಳುತ್ತಿದ್ದಾಗ, ಒಬ್ಬ ವ್ಯಾಪಾರಿ ಮಹಿಳಾ ಅಧಿಕಾರಿ ಕಲ್ಪಿತ ಪಿಂಪಲ್ ಎಂಬವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ದಾಳಿಯಲ್ಲಿ ಪಿಂಪಲ್ ಅವರ ಮೂರು ಬೆರಳುಗಳು ಕಟ್‌ ಆಗಿ, ತಲೆಗೆ ತೀವ್ರ ಪೆಟ್ಟಾಗಿದೆ.
ಮಹಿಳಾ ಅಧಿಕಾರಿ ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಆಕೆಯ ಭದ್ರತಾ ಸಿಬ್ಬಂದಿ ಬೆರಳಿಗೂ ಏಟಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಆರೋಪಿ ಅಮರ್ ಯಾದವ್ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಆತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು,. ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಕಾರ್ಸ ವದಾವಳಿ ಪೊಲೀಸರು 307 (ಕೊಲೆ ಯತ್ನ) ಮತ್ತು 353 (ಸಾರ್ವಜನಿಕ ಸೇವಕರನ್ನು ಕರ್ತವ್ಯ ನಿರ್ವಹಿಸದಂತೆ ತಡೆಯಲು ಹಲ್ಲೇ ಅಥವಾ ಕ್ರಿಮಿನಲ್ ಪೋರ್ಸ್) ಸೇರಿದಂತೆ ವಿವಿಧ ಭಾರತೀಯ ದಂಡ ಸಂಹಿತೆ ಸೆಕ್ಷನ್ ಅಡಿಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪಿಂಪಲ್ ಅನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಆಕೆಯ ಬೆರಳುಗಳನ್ನು ಮತ್ತೆ ಜೋಡಿಸಲು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಯಿತು ಮತ್ತು ಅವರ ತಲೆಗೆ ಆದ ಗಾಯಗಳಿಗೆ ವೈದ್ಯಕೀಯ ಚಿಕಿತ್ಸೆಯನ್ನು ಸಹ ಒದಗಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ನೀವು ಅಮಾಯಕರಲ್ಲ : ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್‌ ಮತ್ತೆ ತರಾಟೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement