ಸೇತುವೆ ನಿರ್ಮಿಸಬೇಕೇ ಹೊರತು ಗೋಡೆಗಳನ್ನಲ್ಲ:ರಾಹುಲ್‌

ನವ ದೆಹಲಿ: ದೆಹಲಿ ಸಿಂಗು ಗಡಿಯಲ್ಲಿ ರೈತರು ನಡೆಸುತ್ತಿರುವ ಆಂದೋಲನ ಸ್ಥಳದಲ್ಲಿ ಪೊಲೀಸರು  ಬ್ಯಾರಿಕೇಡ್‍ಗಳು ಮತ್ತು ರಸ್ತೆ ತಡೆಗಳನ್ನು ನಿರ್ಮಿಸುತ್ತಿರುವುದನ್ನು  ಕಾಂಗ್ರೆಸ್‌ ನಾಯಕ   ರಾಹುಲ್ ಗಾಂಧಿ ಖಂಡಿಸಿದ್ದಾರೆ.

, ಕೇಂದ್ರ ಸರ್ಕಾರ ರೈತರ ನಡುವೆ ಸೇತುವೆಗಳನ್ನು ನಿರ್ಮಿಸಬೇಕೇ  ಹೊರತು ಈ ರೀತಿ ಗೋಡೆಗಳನ್ನು ನಿರ್ಮಿಸುವುದಲ್ಲ ಎಂದು ರಾಹುಲ್‌ ಹೇಳಿದ್ದಾರೆ.

ದೆಹಲಿ ಗಡಿ ಪ್ರದೇಶಗಳಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಗೋಡೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಕೃಷಿ ಕಾನೂನುಗಳ ವಿರುದ್ಧ ಆಂದೋಲನ ನಡೆಸುತ್ತಿರುವ ಪ್ರತಿಭಟನಾಕಾರರ ಸಂಚಾರವನ್ನು ಮತ್ತಷ್ಟು ನಿರ್ಬಂಧಿಸಲು ಸಿಂಗು ಗಡಿಯಲ್ಲಿ ಮುಖ್ಯ ಹೆದ್ದಾರಿಯ ಅಕ್ಕಪಕ್ಕ ಸಿಮೆಂಟ್ ತಡೆಗೋಡೆಗಳ ನಡುವೆ ಕಬ್ಬಿಣದ ರಾಡ್‍ಗಳನ್ನು ಜೋಡಿಸಲಾಗಿದೆ.

ದೆಹಲಿ-ಹರಿಯಾಣ ಗಡಿಯಲ್ಲಿರುವ ಹೆದ್ದಾರಿಯ ಮತ್ತೊಂದು ಭಾಗವನ್ನು ತಾತ್ಕಾಲಿಕ ಸಿಮೆಂಟ್ ಗೋಡೆ ನಿರ್ಮಿಸಿ  ನಿರ್ಬಂಧಿಸಲಾಗಿದೆ.  ಗಾಜಿಯಾಪುರ್ ಬಳಿಯ ದೆಹಲಿ-ಉತ್ತರ ಪ್ರದೇಶ ಗಡಿಯಲ್ಲಿ ಬಹುಸಂಖ್ಯೆಯಲ್ಲಿ ಬ್ಯಾರಿಕೇಡ್‍ಗಳನ್ನು ಹಾಕಿ ಹಾಗೂ  ತಂತಿಬೇಲಿಗಳನ್ನು ನಿರ್ಮಿಸಿ ಓಡಾಟಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ.

ರೈತರ ಪ್ರತಿಭಟನಾ ಸ್ಥಳಗಳಲ್ಲಿ ಕೇಂದ್ರ ಸರ್ಕಾರ ಸೇತುವೆಗಳನ್ನು ನಿರ್ಮಿಸಬೇಕೆ ಹೊರತು, ಗೋಡೆಗಳನ್ನಲ್ಲ ಎಂದು ಫೋಟೋಗಳ ಸಮೇತ ತಮ್ಮ ಟ್ವೀಟ್‍ನಲ್ಲಿ ಫೋಸ್ಟ್ ಮಾಡಿದ್ದಾರೆ. ಕೇಂದ್ರ ಸರ್ಕಾರ ರೈತರ ಜತೆ ಮಾತನಾಡಿ ಅವರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭೆ ಚುನಾವಣೆ : 1ನೇ ಹಂತದಲ್ಲಿ 62.37%ರಷ್ಟು ಮತದಾನ ; 2019ರ ಮತದಾನದ ಪ್ರಮಾಣಕ್ಕಿಂತ ಕಡಿಮೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement