ರೈತರ ಪ್ರತಿಭಟನೆ: ವಿದೇಶಿಯರ ಹಸ್ತಕ್ಷೇಪಕ್ಕೆ ಕೇಂದ್ರ ಆಕ್ಷೇಪ

ನವ ದೆಹಲಿ: ನೂತನ ಕೃಷಿ ಮಸೂದೆಗಳನ್ನು ಖಂಡಿಸಿ ನಡೆಯುತ್ತಿರುವ ರೈತರ ಹೋರಾಟದ ಕುರಿತು ಕೆಲ ವಿದೇಶಿಯರು ಹೇಳಿಕೆ ನೀಡಿದ್ದನ್ನು ಭಾರತ ಖಂಡಿಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಖ್ಯಾತ‌  ಪಾಪ್‌ ಗಾಯಕಿ‌ ರಿಹಾನಾ ಹಾಗೂ ಪರಿಸರ ಹೋರಾಟಗಾರರಾದ ಗ್ರೆಟಾ ಥಂಬರ್ಗ್‌ ರೈತರ ಹೋರಾಟಕ್ಕೆ ಬೆಂಬಲ ನೀಡಿದ ಮರುದಿನ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿದೆ. ಕೆಲ ಸ್ವ ಹಿತಾಸಕ್ತಿ ಹೊಂದಿದ ಗುಂಪುಗಳು ತಮ್ಮ ಸಿದ್ಧಾಂತವನ್ನು ಹೋರಾಟದ ಮೇಲೆ ಹೇರುತ್ತಿರುವುದು ಹಾಗೂ ಹೋರಾಟಗಾರರ ದಿಕ್ಕು ತಪ್ಪಿಸುತ್ತಿರುವುದು ದುರ್ಭಾಗ್ಯಕರ. ಭಾರತದ ಸಂಸತ್ತು ವ್ಯಾಪಕ ಚರ್ಚೆಯ ನಂತರ ನೂತನ ಕೃಷಿ ಮಸೂದೆಗೆ ಅನುಮೋದನೆ ನೀಡಿದೆ. ನೂತನ ಕಾಯ್ದೆಯಿಂದ ರೈತರಿಗೆ ಉತ್ಪನ್ನಗಳ ಮಾರಾಟಕ್ಕೆ ಮಾರುಕಟ್ಟೆ ಅವಕಾಶಗಳು ವಿಸ್ತರಿಸಲಿವೆ.  ಇದು ಆರ್ಥಿಕ ಪ್ರಗತಿಗೆ ಹಾಗೂ ಸುಸ್ಥಿರ ಕೃಷಿಗೆ ಪೂರಕವಾಗಲಿದೆ. ಕೆಲ ರೈತರು ಮಾತ್ರ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾಕಾರರ ಭಾವನೆಗಳಿಗೆ ಬೆಲೆ ನೀಡಿದ ಕೇಂದ್ರ ಸರಕಾರ ಪ್ರತಿಭಟನಾಕಾರರ ಪ್ರತಿನಿಧಿಗಳೊಂದಿಗೆ ಸರಣಿ ಚರ್ಚೆ ನಡೆಸುತ್ತಿದೆ. ಕೇಂದ್ರ ಸಚಿವರು ರೈತರೊಂದಿಗೆ ಸಭೆ ನಡೆಸುತ್ತಿದ್ದು, ಈವರೆಗೆ ೧೧ ಸುತ್ತಿನ ಮಾತುಕತೆ ನಡೆದಿದೆ. ಭಾರತೀಯ ಪೊಲೀಸ್‌ ಪಡೆಗಳು ಪ್ರತಿಭಟನೆಯನ್ನು ಸಮರ್ಪಕವಾಗಿ ನಿಭಾಯಿಸಿದ್ದಾರೆ. ನೂರಾರು ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಮತ್ತೆ 9000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ ಅಮೆಜಾನ್

ಯಾವುದೇ ಹೇಳಿಕೆ ನೀಡುವ ಮುನ್ನ ಸಮರ್ಪಕವಾಗಿ ವಿಷಯವನ್ನು ಮನಗಾಣಬೇಕು. ಸೆಲೆಬ್ರಿಟಿಗಳು ಹಾಗೂ ಇತರರು ಸಾಮಾಜಿಕ ಜಾಲತಾಣಗಳಲ್ಲಿ ವೈಭವೀಕರಣದ ಹೇಳಿಕೆಗಳು ಹಾಗೂ ಹ್ಯಾಷ್‌ಟ್ಯಾಗ್‌  ಹಾಕುವುದು ಸಮರ್ಪಕವಾದುದಲ್ಲ ಎಂದು ಸಚಿವಾಲಯದ ಪ್ರಕಟನೆ ತಿಳಿಸಿದೆ.

 

 

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement