ಪಂಜಾಬ್‌ ಪೊಲೀಸರಿಗೆ ಫೈಲ್‌ ಹಿಂದಿರುಗಿಸಿದ ಸಿಬಿಐ

ಕೇಂದ್ರೀಯ ತನಿಖಾ ದಳವು (ಸಿಬಿಐ) 2015ರ ಸಕ್ರಿಲೇಜ್‌ ಘಟನೆಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಫೈಲ್‌ಗಳನ್ನು ಪಂಜಾಬ್ ಪೊಲೀಸರಿಗೆ ಹಿಂದಿರುಗಿಸಿದೆ ಎಂದು ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.
ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯಕ್ಕೆ ಅವಕಾಶ ನೀಡಬೇಕೆಂಬುದು ಪಂಜಾಬ್‌ ಕಾಂಗ್ರೆಸ್ ಸರ್ಕಾರದ ಬಹುದಿನಗಳ ಬೇಡಿಕೆಯಾಗಿತ್ತು. ಈ ಪ್ರಕರಣಗಳನ್ನು ಹಿಂದಿನ ಎಸ್‌ಎಡಿ-ಬಿಜೆಪಿ ಸರ್ಕಾರ ಸಿಬಿಐಗೆ ಹಸ್ತಾಂತರಿಸಿತ್ತು. ಸಿಬಿಐಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನಿಗದಿಪಡಿಸಿದ ಗಡುವು ಮುಕ್ತಾಯಗೊಳ್ಳಲು ಗಂಟೆಗಳ ಮೊದಲು ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳು ಮತ್ತು ಫೈಲ್‌ಗಳನ್ನು ಪಂಜಾಬ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಪ್ರಕರಣಗಳನ್ನು ಹಸ್ತಾಂತರಿಸುವಲ್ಲಿ ವಿಳಂಬವಾಗಿದೆ ಎಂದು ಅಮರಿಂದರ್ ಅಕಾಲಿ ಪಕ್ಷದ ಮುಖಂಡರನ್ನು ದೂಷಿಸಿದರು. “ಅಕಾಲಿಗಳು ಕೇಂದ್ರ ಸರ್ಕಾರಕ್ಕೆ ನೀಡಿದ ಬೆಂಬಲ ಹಿಂಪಡೆದ ಕೆಲವೇ ತಿಂಗಳುಗಳಲ್ಲಿ ಸಿಬಿಐ ಅಂತಿಮವಾಗಿ ಪ್ರಕರಣಗಳಿಗೆ ಸಂಬಂಧಿಸಿದ ರಾಜ್ಯ ಪೊಲೀಸ್ ಪತ್ರಿಕೆಗಳಿಗೆ ಹಸ್ತಾಂತರಿಸಿತು. ಪ್ರಕರಣಗಳಲ್ಲಿ ತಮ್ಮ ಪಾತ್ರ ಬಹಿರಂಗಗೊಳ್ಳುವುದನ್ನು ತಡೆಯಲು ಎಸ್‌ಎಡಿ ಪಂಜಾಬ್‌ ಪೊಲೀಸರಿಗೆ ದಾಖಲೆ ಒದಗಿಸುವ ಪ್ರಕ್ರಿಯೆಯನ್ನು ತಡೆಯುತ್ತಿತ್ತು ಎಂಬುದು ಇದರಿಂದ ಸ್ಪಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.
ಪಂಜಾಬ್‌ ಪೊಲೀಸರು ನಡೆಸುವ ತನಿಖೆಯಲ್ಲಿ ತಪ್ಪಿತಸ್ಥರೆಲ್ಲರಿಗೆ ಶಿಕ್ಷೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement