ಅಸ್ಸಾಂ ಚಹಾ ವಿರುದ್ಧ ವಿದೇಶಿ ಶಕ್ತಿಗಳ ಪಿತೂರಿ: ಮೋದಿ

ಆಸ್ಸಾಂ: ಕೆಲ ವಿದೇಶಿ ಶಕ್ತಿಗಳು ನಮ್ಮ ಭಾರತೀಯ ಚಹಾದ ಘನತೆ ಕುಂದಿಸುಲ್ಲಿ ನಿರತವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅವರು ಆಸ್ಸಾಂನಲ್ಲಿ ಚಹಾ ತೋಟಗಳ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿ, ಅಸ್ಸಾಂ ಚಹಾದ ವಿರುದ್ಧ ಕೆಲ ವಿದೇಶಿ ಶಕ್ತಿಗಳು ಪಿತೂರಿ ನಡೆಸಿವೆ. ಭಾರತೀಯ ಚಹಾದ ಘನತೆಯನ್ನು ವಿಶ್ವಾದ್ಯಂತ ವ್ಯವಸ್ಥಿತವಾಗಿ ಹಾಳು ಮಾಡುವಲ್ಲಿ ಕೆಲ ಶಕ್ತಿಗಳು ನಿರತವಾಗಿವೆ ಎಂದರು.
ಕೆಲ ವಿದೇಶಿ ಶಕ್ತಿಗಳು ನಮ್ಮ ಚಹಾದ ಬಗ್ಗೆ ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿರುವ ಬಗ್ಗೆ ನಮಗೆ ಕೆಲ ದಾಖಲಾತಿಗಳು ದೊರೆತಿವೆ. ಈ ಕುರಿತು ಮೌನ ವಹಿಸಿರುವ ಬಗ್ಗೆ ರಾಜಕೀಯ ಪಕ್ಷಗಳಿಂದ ಎಲ್ಲರೂ ಸ್ಪಷ್ಟನೆ ಕೇಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಚಹಾ ತೋಟದಲ್ಲಿ ಕೆಲಸ ಮಾಡುವ ಗರ್ಭಿಣಿಯರಿಗೆ ೧೨೦೦೦ರೂ. ಆರ್ಥಿಕ ನೆರವು ನೀಡುವ ಯೋಜನೆಯನ್ನು ಪ್ರಧಾನಿ ಉಲ್ಲೇಖಿಸಿದರು. ಚಹಾ ತೋಟಗಳಿಗೆ ವೈದ್ಯಕೀಯ ಘಟಕಗಳನ್ನು ಕಳಿಸಲಾಗುವುದಲ್ಲದೇ ಉಚಿತವಾಗಿ ಕಾರ್ಮಿಕರಿಗೆ ಔಷಧ ಪೂರೈಸಲಾಗುತ್ತದೆ ಎಂದರು.
ಅಸ್ಸಾಂನ ಚಹಾ ಸಮುದಾಯದ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ ₹ 1,000 ಕೋಟಿ ಮೊತ್ತದ ವಿಶೇಷ ಯೋಜನೆಯನ್ನು ಘೋಷಿಸಲಾಗಿದೆ ಎಂದು ಹೇಳಿದ ಅವರು, ಇದು ಕಾರ್ಮಿಕರ ಜೀವನವನ್ನು ಸರಳಗೊಳಿಸುತ್ತದೆ ಎಂದು ಹೇಳಿದರು.
ಸ್ವಾತಂತ್ರ್ಯಾನಂತರ ಈವರೆಗೆ ೭೦ ವರ್ಷಗಳಲ್ಲಿ ಆಸ್ಸಾಂನಲ್ಲಿ ಕೇವಲ ೬ ವೈದ್ಯಕೀಯ ಕಾಲೇಜುಗಳಿದ್ದವು. ಕಳೆದ ಐದು ವರ್ಷಗಳಲ್ಲಿ ನೂತನ ೬ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲಾಗಿದೆ. ಇದರಿಂದ ಪ್ರತಿವರ್ಷ ೧೬೦೦ ವೈದ್ಯರು ರೂಪಗೊಳ್ಳಲು ನೆರವಾಗುತ್ತದೆ ಎಂದು ನುಡಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement