ತೆಂಡುಲ್ಕರ್‌ ಹೇಳಿಕೆಗೆ ಪವಾರ್‌ ಆಕ್ಷೇಪ

ಮುಂಬೈ: ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಹೇಳಿಕೆ ನೀಡುವಾಗ ಜಾಗರೂಕವಾಗಿರಿ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್‌ಗೆ ಸಲಹೆ ನೀಡಿದ್ದಾರೆ.
ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಗಣ್ಯರು ನೀಡಿದ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ ಸಚಿನ್, ಭಾರತದ ಸಾರ್ವಭೌಮತ್ವದೊಂದಿಗೆ ರಾಜಿ ಮಾಡಲು ಸಾಧ್ಯವಿಲ್ಲ ಮತ್ತು ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದು, ಆದರೆ ಭಾಗವಹಿಸುವವರಲ್ಲ ಎಂದು ಹೇಳಿಕೆ ನೀಡಿದ್ದರು.
ಸಚಿನ್‌ ತೆಂಡುಲ್ಕರ್‌ ಕ್ರಿಕೆಟ್‌ ಬಿಟ್ಟು ಬೇರೆ ವಿಷಯಗಳ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಜಾಗರೂಕವಾಗಿರಬೇಕು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಹಲವರು ಟ್ವೀಟ್‌ನಲ್ಲಿ ಪವಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದು, ಎನ್‌ಸಿಪಿ ಅಧ್ಯಕ್ಷರು ಸಚಿನ್‌ ತೆಂಡುಲ್ಕರ್‌ಗೆ ಸಲಹೆ ನೀಡುವ ಅವಶ್ಯಕತೆಯಿಲ್ಲ ಎಂದು ಹರಿಹಾಯ್ದಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement