ಕೇರಳ ಚುನಾವಣೆಯಲ್ಲಿ ಶಬರಿಮಲೆ ಕಾರ್ಡ್‌ ಬಳಸಲು ಕಾಂಗ್ರೆಸ್‌ ಚಿಂತನೆ

ಮುಂಬರಲಿರುವ ಕೇರಳ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶಬರಿಮಲೆ ಕಾರ್ಡ್‌ ಬಳಸಲು ಕಾಂಗ್ರೆಸ್‌ ಮುಂದಾಗಿದೆ.
ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಯುಡಿಎಫ್ ಅಧಿಕಾರಕ್ಕೆ ಬಂದರೆ ಶಬರಿಮಲೆ ದೇವಾಲಯದ ಪದ್ಧತಿಗಳ ರಕ್ಷಣೆಗೆ ಕಾನೂನನ್ನು ಜಾರಿಗೆ ತರಲಿದೆ ಎಂದು ಹೇಳಿದರು.
ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ತಿರುವಂಚೂರು ರಾಧಾಕೃಷ್ಣನ್ ಬಿಡುಗಡೆ ಮಾಡಿದ ‘ಕರಡು ಪ್ರತಿಯಲ್ಲಿ ಶಬರಿಮಲೆ ದೇವಾಲಯದ ಆಚರಣೆಗಳ ಉಲ್ಲಂಘನೆ ಮಾಡಿದರೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ಉಲ್ಲೇಖಿಸಲಾಗಿದೆ. ನಾವು ಅಧಿಕಾರಕ್ಕೆ ಬಂದರೆ ಕಾನೂನನ್ನು ಜಾರಿಗೊಳಿಸುತ್ತೇವೆ. ತಂತ್ರಿಗಳೊಂದಿಗೆ ಚರ್ಚಿಸಿ ಈ ಪ್ರಾಸ್ತಾವಿತ ಕಾನೂನಿನಡಿಯಲ್ಲಿ ಶಬರಿಮಲೆಗೆ ಅನಧಿಕೃತ ಪ್ರವೇಶ ನಿಷೇಧಿಸಲಾಗುವುದು, ಹಾಗೂ ಅಲ್ಲಿನ ಪದ್ಧತಿಗಳು ಅಥವಾ ಆಚರಣೆಗಳ ಉಲ್ಲಂಘನೆಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು ಎಂದು ರಾಧಾಕೃಷ್ಣನ್ ಕೊಟ್ಟಾಯಂನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಯುಡಿಎಫ್‌ನ ಕರಡು ಕಾನೂನಿಗೆ ಪ್ರತಿಕ್ರಿಯಿಸಿದ ಸಿಪಿಐ (ಎಂ) ರಾಜ್ಯ ಕಾರ್ಯದರ್ಶಿ ಎ ವಿಜಯರಾಘವನ್, ಯುಡಿಎಫ್ ಜನರನ್ನು ಮರುಳು ಮಾಡುತ್ತಿದೆ ಎಂದು ಹೇಳಿದ್ದು ಸುಪ್ರೀಂ ಕೋರ್ಟ್‌ನ ಪರಿಗಣನೆಯಲ್ಲಿರುವ ವಿಷಯದಲ್ಲಿ ಕಾನೂನನ್ನು ರೂಪಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಕೇರಳ ಸರ್ಕಾರವು 10 ರಿಂದ 50 ವರ್ಷದೊಳಗಿನ ಮಹಿಳೆಯರನ್ನು ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಿರುವುದರ ವಿರುದ್ಧ ಬಲಪಂಥೀಯ ಮತ್ತು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಸಾಕ್ಷಿಯಾಗಿತ್ತು. ಅನೇಕ ಪರಿಶೀಲನಾ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಮತ್ತು ಅದನ್ನು ಆಲಿಸಲು ಸಂವಿಧಾನ ಪೀಠವನ್ನು ರಚಿಸಲಾಗಿದೆ.

ಪ್ರಮುಖ ಸುದ್ದಿ :-   ನಟಿ ಸಿದ್ಧಾರ್ಥ- ನಟಿ ಅದಿತಿ ರಾವ್ ಮದುವೆ ಆಗಿಲ್ಲ : ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ; ಸ್ಪಷ್ಟನೆ ನೀಡಿದ ಅದಿತಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement