ಪರಿಷತ್‌ ಅಧ್ಯಕ್ಷ ಸ್ಥಾನಕ್ಕೆ ಹೊರಟ್ಟಿ ನಾಮಪತ್ರ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಬಗ್ಗೆ ನಾನು ಮಾತನಾಡುವುದಿಲ್ಲ. ಈಗ ನನಗೆ ಒಳ್ಳೆಯ ಅವಕಾಶ ಬಂದಿದೆ. ಪಕ್ಷದ ನಿರ್ದೇಶನದ ಮೇರೆಗೆ ನಾಮಪತ್ರ ಸಲ್ಲಿಸಿದ್ದೇನೆ ಎಂದು ಜೆಡಿಎಸ್‍ನ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಬಿಜೆಪಿಯ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದೇನೆ. ಕಾಂಗ್ರೆಸ್‍ನವರು ಅಭ್ಯರ್ಥಿ ಹಾಕಿರುವ ವಿಚಾರವಾಗಿ ನಾನು ಪ್ರತಿಕ್ರಿಯಿಸುವುದಿಲ್ಲ. ಅದು ಅವರ ಪಕ್ಷದ ನಿರ್ಧಾರ. ಚುನಾವಣೆಯಲ್ಲಿ ತಮಗೆ ಗೆಲುವು ಖಚಿತ ಎಂದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

 

 

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

ನಿಮ್ಮ ಕಾಮೆಂಟ್ ಬರೆಯಿರಿ

advertisement