ಕಿಸಾನ್‌ ಮಹಾಪಂಚಾಯತ್‌ನಲ್ಲಿ ಪ್ರಿಯಾಂಕಾ ಗಾಂಧಿ ಭಾಗಿ

ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಫೆ.೧೦ರಂದು ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆಯುವ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಫೆ.೧೩ರಂದು ಪ್ರಿಯಾಂಕಾ ಬಿಜ್ನೋರ್ ಮತ್ತು ಮುಜಫರ್‌ನಗರ ಜಿಲ್ಲೆಗಳ ರೈತರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ. ದೆಹಲಿ ಗಡಿಯಲ್ಲಿ ವಿವಾದಾತ್ಮಕ ಕಾನೂನುಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ಪಂಜಾಬ್‌, ಹರಿಯಾಣ ಹಾಗೂ ಉತ್ತರ ಪ್ರದೇಶ ರಾಜ್ಯಗಳ ರೈತರು ಕಳೆದ ೨ ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ರೈತರ ಮಹಾಪಂಚಾಯತ್‌ನಲ್ಲಿ ಪಾಲ್ಗೊಳ್ಳುತ್ತಿರುವುದು ಮಹತ್ವ ಪಡೆದಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊ...| "ನಮಗೆ ಪ್ರತಿಕ್ರಿಯಿಸಲು 30-45 ಸೆಕೆಂಡುಗಳು ಮಾತ್ರ ಸಮಯ ಇತ್ತು": ಭಾರತದ ಬ್ರಹ್ಮೋಸ್ ಕ್ಷಿಪಣಿ ದಾಳಿ ಬಗ್ಗೆ ಪಾಕ್ ಪ್ರಧಾನಿ ಸಲಹೆಗಾರ

ನಿಮ್ಮ ಕಾಮೆಂಟ್ ಬರೆಯಿರಿ

advertisement