ಉತ್ತರಾಖಂಡ ವಿಪತ್ತು ನಿಧಿಗೆ ಹರ್ಯಾಣದಿಂದ ೧೧ ಕೋಟಿ ನೆರವು

ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್‌ ಖಟ್ಟರ್‌ ಉತ್ತರಾಖಂಡ ರಾಜ್ಯ ವಿಪತ್ತು ನಿಧಿಗೆ ೧೧ ಕೋಟಿ ರೂ. ದೇಣಿಗೆ ನೀಡಿದ್ದು, ವಿಪತ್ತು ಪೀಡಿತ ರಾಜ್ಯಕ್ಕೆ ಸಂಪೂರ್ಣ ಬೆಂಬಲ ನೀಡುವ ಭರವಸೆ ನೀಡಿದ್ದಾರೆ.
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದಲ್ಲಿ ಭಾನುವಾರ ಹಿಮಬಂಡೆ ಕುಸಿದು ಧೌಲಿ ಗಂಗಾ ನದಿಯಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ಇದರಿಂದ ೨೮ ಜನರು ಜೀವ ಕಳೆದುಕೊಂಡಿದ್ದು, ನೂರಾರು ಜನರು ಕಣ್ಮರೆಯಾಗಿದ್ದಾರೆ. ಹೈಡ್ರೊ ಪ್ರಾಜೆಕ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 35 ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ. ಅವರನ್ನು ರಕ್ಷಿಸಲು ಕಾರ್ಯಾಚರಣೆ ನಡೆಯುತ್ತಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಶಿರಸಿ: ಕಸ್ತೂರಿರಂಗನ್ ವರದಿಯಿಂದ ಉತ್ತರ ಕನ್ನಡ ಜಿಲ್ಲೆಯ 567 ಹಳ್ಳಿಗಳನ್ನು ಕೈಬಿಡಲು ಒತ್ತಾಯಿಸಿ ಸಹಸ್ರಾರು ಆಕ್ಷೇಪಣಾ ಪತ್ರ ಸಲ್ಲಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement