ಗಣರಾಜ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಪಂಜಾಬ್ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.
ಇಕ್ಬಾಲ್ ಸಿಂಗ್ನನ್ನು ಹೋಶಿಯಾರ್ಪುರದಿಂದ ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಸಂಜೀವಕುಮಾರ ಯಾದವ ತಿಳಿಸಿದ್ದಾರೆ.
ಇಕ್ಬಾಲ್ ಸಿಂಗ್ ಅವರು ಕಥಾ ವಚಕ್ ಆಗಿ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು ಧಾರ್ಮಿಕ ಪ್ರಾರ್ಥನೆ ನಡೆಸುತ್ತಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜನವರಿ 26 ರ ಹಿಂಸಾಚಾರದ ವೀಡಿಯೊಗಳಲ್ಲಿ, ಇಕ್ಬಾಲ್ ಸಿಂಗ್ ಅವರು ಕೆಂಪು ಕೋಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಬೆದರಿಕೆ ಹಾಕಿದ್ದರು ಮತ್ತು ಅವರು ತಮ್ಮ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸುವುದಾಗಿ ಬೆದರಿಸಿದ್ದರು. ಕೆಂಪು ಕೋಟೆಯ ದ್ವಾರಗಳನ್ನು ಶಾಂತಿಯುತವಾಗಿ ತೆರೆಯದಿದ್ದರೆ, ಶಸ್ತ್ರಾಸ್ತ್ರಗಳನ್ನು ಬಳಸಲಾಗುವುದು ಮತ್ತು ವ್ಯಾಪಕವಾದ ರಕ್ತಪಾತ ಸಂಭವಿಸುತ್ತದೆ ಎಂದು ಅವರು ಫೇಸ್ಬುಕ್ ವಿಡಿಯೋದಲ್ಲಿ ಎಚ್ಚರಿಕೆ ನೀಡಿದ್ದರು.
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ