ಬೋಧನಾ ಶುಲ್ಕ ಕಡಿತ:ಖಾಸಗಿ ಆಡಳಿತ ಮಂಡಳಿಗಳ ಪ್ರತಿಭಟನೆ

ಬೆಂಗಳೂರು: ಬೋಧನಾ ಶುಲ್ಕದಲ್ಲಿ ಶೇ.೩೦ರಷ್ಟು ಕಡಿತ ಹಾಗೂ ಅಭಿವೃದ್ಧಿ ಶುಲ್ಕ ಹಾಗೂ ಇತರ ಹೆಚ್ಚುವರಿ ಪಾವತಿ ಸ್ಥಗಿತಗೊಳಿಸಿದ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ೬ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ.
ಫೆ.೨೩ರೊಳಗೆ ಸರಕಾರ ತನ್ನ ನಿರ್ಧಾರವನ್ನು ರದ್ದುಗೊಳಿಸದಿದ್ದರೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿ ನಿರ್ಧರಿಸಲಾಗಿದೆ.
ಶುಲ್ಕ ಕಡಿತವನ್ನು ರದ್ದುಗೊಳಿಸುವಂತೆ ಸರ್ಕಾರವನ್ನು ಕೇಳುವುದರೊಂದಿಗೆ ಬೋಧಕೇತರ ಸಿಬ್ಬಂದಿ ಕಷ್ಟಗಳಿಗೆ ಸ್ಪಂದಿಸಲು ಮತ್ತು ಶಾಲೆಗಳೊಂದಿಗಿನ ಹಣದ ಕೊರತೆಯಿಂದ ಉಂಟಾದ ನಷ್ಟವನ್ನು ಭರಿಸಲು ಸಂಘಗಳು ಸರ್ಕಾರದಿಂದ ಅನುದಾನವನ್ನು ಕೇಳಿಕೊಂಡಿವೆ.
ಶುಲ್ಕ ಕಡಿತದ ಆದೇಶವನ್ನು ಸರ್ಕಾರ ಹಿಂತೆಗೆದುಕೊಳ್ಳುವ ಅಗತ್ಯವಿದೆ ಎಂದು ಕರ್ನಾಟಕದ ಇಂಗ್ಲಿಷ್ ಮಾಧ್ಯಮ ಶಾಲೆಗಳ (ಕೆಎಎಂಎಸ್) ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ಸ್‌ನ ಪ್ರಧಾನ ಕಾರ್ಯದರ್ಶಿ ಶಶಿ ಕುಮಾರ್ ತಿಳಿಸಿದ್ದಾರೆ.
ಕ್ಷೇತ್ರ ಶಿಕ್ಷಣ ಅಧಿಕಾರಿ (ಬಿಇಒ) ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳ ಭ್ರಷ್ಟಾಚಾರದಿಂದ ಸಮಸ್ಯೆಯಾಗಿದೆ. ಶಾಲೆಗಳನ್ನು ರಕ್ಷಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಮಕ್ಕಳ ಸುರಕ್ಷತಾ ಕಾಯ್ದೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸುರಕ್ಷತಾ ಮಾನದಂಡಗಳ ಅಡಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮಾನ್ಯತೆ ನೀಡಬೇಕೆಂದು ಆರು ಸಂಘಟನೆಗಳು ಒತ್ತಾಯಿಸಿವೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement