ಜನವರಿ ೨೬ರಂದು ನಡೆದ ರೈತರ ಟ್ರಾಕ್ಟರ್ ರ್ಯಾಲಿಯಲ್ಲಿ ಮೃತಪಟ್ಟ ರೈತನ ಕುಟುಂದವರು ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕೆಂದು ದೆಹಲಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ.
೨೫ ವರ್ಷದ ನವೀತ್ ಸಿಂಗ್ ರ್ಯಾಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟಿದ್ದಾರೆ. ದೆಹಲಿ ಪೊಲೀಸರ ಪ್ರಕಾರ ನವೀತ್ ಸಿಂಗ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆದರೆ ಕಟುಂಬದ ಸದಸ್ಯರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಪೊಲೀಸರು ಗುಂಡು ಹಾರಿಸಿದ್ದಕ್ಕೆ ಟ್ರಾಕ್ಟರ್ ಚಾಲನೆ ಮಾಡುತ್ತಿದ್ದ ನವೀತ್ ಸಿಂಗ್ ನಿಯಂತ್ರಣ ಕಳೆದುಕೊಂಡಿದ್ದಕ್ಕೆ ಅಪಘಾತ ಸಂಭವಿಸಿದೆ ಎಂದು ದೂರಿದ್ದಾರೆ. ಅಲ್ಲದೇ ಟ್ರಾಕ್ಟರ್ ಪಲ್ಟಿಯಾದ ಸಂದರ್ಭದಲ್ಲಿ ದೆಹಲಿ ಪೊಲೀಸರು ವೈದ್ಯಕೀಯ ಚಿಕಿತ್ಸೆ ಕೊಡಿಸಲು ಮುಂದಾಗಲಿಲ್ಲ ಎಂದು ತಿಳಿಸಲಾಗಿದೆ.
ಅಲ್ಲದೇ ಸಮೀಪದ ಆಂಧ್ರ ಎಜುಕೇಶನ್ ಸೊಸೈಟಿ ಅಳವಡಿಸಿಕೊಂಡ ಸಿಸಿ ಟಿವಿ ಸಂಗ್ರಹದ ಡಿವಿಆರ್ಅನ್ನು ಪೊಲೀಸರು ತೆಗೆದು ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ನವ್ರೀತ್ ಸಾವಿನ ವರದಿಗೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತರ ವಿರುದ್ಧ ಎಫ್ಐಆರ್ ನೋಂದಣಿ ಮಾಡುವುದರಿಂದ ದೆಹಲಿ ಪೊಲೀಸರು ನ್ಯಾಯಯುತ ತನಿಖೆ ನಡೆಸುವ ಸಾಧ್ಯತೆ ಕಡಿಮೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಲಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ