ರಾಜ್ಯಪಾಲರ ಕಚೇರಿ ಖಚಿತ ಪಡಿಸದ ಕಾರಣ ಗೊಂದಲ

ಮುಂಬೈ: ಸರಕಾರಿ ವಿಮಾನ ಬಳಕೆಯನ್ನು ರಾಜಭವನ ಸಚಿವಾಲಯ ಖಚಿತಪಡಿಸದ ಕಾರಣದಿಂದಾಗಿಯೇ ರಾಜ್ಯಪಾಲ ಭಗತ್‌ ಸಿಂಗ್‌ ಕೋಶ್ಯಾರಿ ಅವರ ಉತ್ತರಾಖಂಡ ಪ್ರಯಾಣಕ್ಕೆ ವಿಳಂಬವಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಕಚೇರಿ ತಿಳಿಸಿದೆ..

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಉತ್ತರಾಖಂಡದ ಡೆಹ್ರಾಡೂನ್‌ಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಸಂವಹನ ಕೊರತೆಯಿಂದಾಗಿ ರಾಜ್ಯಪಾಲರು ಸರಕಾರಿ ವಿಮಾನದಲ್ಲಿ ತೆರಳಲು ಸಾಧ್ಯವಾಗಲಿಲ್ಲ. ರಾಜ್ಯಪಾಲರು ವಿಮಾನ ಹತ್ತುವ ಮುನ್ನ ಅನುಮತಿಗಾಗಿ ಕೋರಲಾಗಿತ್ತು. ಆದರೆ ಮುಖ್ಯಮಂತ್ರಿಯ ಕಚೇರಿ ವಿಮಾನ ಬಳಕೆಗೆ ಅನುಮೋದನೆ ನೀಡಲಿಲ್ಲ. ಆದರೂ ರಾಜ್ಯಪಾಲರನ್ನು ವಿಮಾನ ಹತ್ತಲು ಕರೆದೊಯ್ಯಲಾಗಿತ್ತು. ಆದರೆ ಸರಕಾರಿ ವಿಮಾನದಲ್ಲಿ ಪ್ರಯಾಣಿಸಲು ರಾಜ್ಯಪಾಲರಿಗೆ ಸಾಧ್ಯವಾಗಲಿಲ್ಲ. ಇದರಿಂದಾಗಿ ರಾಜ್ಯಪಾಲ ಕೋಶ್ಯಾರಿ ಅವರು ಖಾಸಗಿ ವಿಮಾನದಲ್ಲಿ ತೆರಳಬೇಕಾಯಿತು.

ಫಡ್ನವೀಸ್‌ ಖಂಡನೆ: ರಾಜ್ಯಪಾಲರಿಗೆ ಸರಕಾರಿ ವಿಮಾನ ಬಳಸಲು ಮುಖ್ಯಮಂತ್ರಿ ಉದ್ಧವ ಠಾಕ್ರೆ ಅವಕಾಶ ನೀಡದಿರುವುದನ್ನು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಖಂಡಿಸಿದ್ದಾರೆ. ರಾಜ್ಯದ ಇತಿಹಾಸದಲ್ಲಿಯೇ ಮೊದಲ ಬಾರಿ ರಾಜ್ಯಪಾಲರಿಗೆ ಸರಕಾರಿ ವಿಮಾನ ಬಳಕೆಗೆ ಅಡ್ಡಿಪಡಿಸಲಾಗಿದೆ. ಇದು ಮಹಾರಾಷ್ಟ್ರದ ಇತಿಹಾಸದಲ್ಲಿಯೇ ಕರಾಳದಿನವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

ಇಂದಿನ ಪ್ರಮುಖ ಸುದ್ದಿ :-   ಎನ್‌ಐಆರ್‌ ಎಫ್‌ 2023 ಶ್ರೇಯಾಂಕ: ಒಟ್ಟಾರೆ ವಿಭಾಗದಲ್ಲಿ ಐಐಟಿ ಮದ್ರಾಸಿಗೆ ಅಗ್ರಸ್ಥಾನ, ಬೆಂಗಳೂರು ಐಐಎಸ್‌ ಸಿಗೆ 2ನೇ ಸ್ಥಾನ ; ಸಂಪೂರ್ಣ ಪಟ್ಟಿ ಇಲ್ಲಿದೆ

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement