ಟೀಕಿಸುವುದರಲ್ಲೇ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ: ಎಚ್‌ಡಿಕೆ ಲೇವಡಿ

ಬೆಂಗಳೂರು: ಸವಾಲು ಸ್ವೀಕರಿಸಲಾಗದವರು ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಲೇವಡಿ ಮಾಡಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿದ ಮೇಲೆ ಜೆಡಿಎಸ್ ಪಕ್ಷ ಹಾಗೂ ಇದರ ನಾಯಕತ್ವದ ಬಗ್ಗೆ ಮಾತನಾಡಲು ಎಂದು ಸವಾಲು ಹಾಕುತ್ತಿದ್ದರೂ ಈತನಕ ಸವಾಲು ಸ್ವೀಕರಿಸಿಲ್ಲ ಎಂದು ಲೇವಡಿ ಮಾಡಿದ್ದಾರೆ.
ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ‌. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆಯೇ ಎಂದು ಪ್ರಶ್ನಿಸಿರುವ ಕುಮಾರಸ್ವಾಮಿ, ಸುಮ್ಮನೆ ಮಾತನಾಡಿವುದನ್ನು ನಿಲ್ಲಿಸಿ ಎಂದು ಹೇಳಿದ್ದಾರೆ.
ಜೆಡಿಎಸ್ ಚುನಾವಣೆ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯ ಅವರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತಲ್ಲ. ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್‌ನವರಾಗಿದ್ದರು ಎಂದು ತಿರುಗೇಟು ನೀಡಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್‌ಗೆ ಅಲ್ಲ, ಜೆಡಿಎಸ್‌ಗೆ ಅಲ್ಲ, ನಿಮಗೆ. 2008ರಲ್ಲಿ ನಡೆದ ಆಪರೇಷನ್ ಕಮಲದ ಉಪ ಚುನಾವಣೆಗಳಲ್ಲಿ ನೀವು ಮಾಡಿದ್ದನ್ನು ನೆನಪಿಸಲೇ ಎಂದು ಕೇಳಿದ್ದಾರೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement