ತಮಿಳುನಾಡಿನಲ್ಲಿ ಪಟಾಕಿ ಘಟಕ ಸ್ಫೋಟ:೧೩ ಸಾವು, ೨೨ ಜನರಿಗೆ ಗಾಯ

ಚೆನ್ನೈ: ತಮಿಳುನಾಡಿನಲ್ಲಿ ಪಟಾಕಿ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ 13 ಮಂದಿ ಮೃತಪಟ್ಟಿದ್ದು, 22 ಮಂದಿಗೆ ಗಾಯಗಳಾಗಿವೆ.
ಶುಕ್ರವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ.
ವೆಂಬಕೊಟ್ಟೈ ನ ಕೊಟ್ಟೈಪಾಟಿಯಲ್ಲಿರುವ ಅಚಂಕುಲಂ ಈ ಅವಘಡ ನಡೆದಿದ್ದು, ಮೃತಪಟ್ಟವರ 11 ಮಂದಿಯ ಪೈಕಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗಾಯಗೊಂಡ ಇಬ್ಬರನ್ನು ಸಟ್ಟೂರ್‌ ಆಸ್ಪತ್ರೆಗೆ ಸೇರಿಸಲಾಯಿತಾದರೂ ಗಂಭೀರ ಗಾಯಗಳಾಗಿದ್ದ ಾವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತದೇಹಗಳು ಸಂಪೂರ್ಣ ಸುಟ್ಟಿದ್ದು, ಗುರುತು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಘಟನೆ ವರದಿಯಾದ ಬೆನ್ನಲ್ಲೇ ಮೂರು ಅಗ್ನಿಶಾಮಕ ವಾಹನಗಳೊಂದಿಗೆ, 30 ರಕ್ಷಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಸ್ಫೋಟದಲ್ಲಿ 10 ಕೊಠಡಿಗಳು ನಾಶವಾಗಿದೆ. ಘಟನೆ ನಡೆದಾಗ ೫೦ರಷ್ಟು ಕಾರ್ಮಿಕರು ಒಳಗಡೆ ಇದ್ದರು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಗಣೇಶನ್ ಹೇಳಿದ್ದಾರೆ, ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಮೂಲಗಳ ಪ್ರಕಾರ ಯುನಿಟ್ಟನ್ನು ಹಲವು ಮಂದಿ ಗುತ್ತಿಗೆದಾರರಿಗೆ ಅಕ್ರಮವಾಗಿ ನೀಡಿದ್ದು, ನಿರ್ಲಕ್ಷ್ಯದಿಂದ ಸಂಭವಿಸಿರಬಹುದು ಎನ್ನಲಾಗಿದ್ದು, ನಿಖರವಾದ ಕಾರಣ ತಿಳಿದುಬರಬೇಕಿದೆ. ಸ್ಥಳೀಯ ಪೊಲೀಸ್ ಠಾಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಪ್ರಾರಂಭಿಸಿದ್ದಾರೆ.

ಪ್ರಮುಖ ಸುದ್ದಿ :-   ರೋಹಿತ್ ವೇಮುಲಾ ದಲಿತನಲ್ಲ : ಪೊಲೀಸರ ಅಂತಿಮ ವರದಿ ; ಎಲ್ಲ ಆರೋಪಿಗಳಿಗೆ ಕ್ಲೀನ್ ಚಿಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement