ರೈತ ವಿರೋಧಿ ಕಾನೂನುಗಳು ದೇಶವಾಸಿಗಳ ಮೇಲೆ ನಡೆಸಿದ ದಾಳಿ: ರಾಹುಲ್‌ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ದಾಳಿ ಮುಂದುವರೆಸಿದ ರಾಹುಲ್‌ ಗಾಂಧಿ, ರೈತ ವಿರೋಧಿ ಮೂರು ಕಾನೂನುಗಳು ಕೇವಲ ರೈತರ ಮೇಲಷ್ಟೇ ಅಲ್ಲ, ದೇಶದ ಶೇ.೪೦ರಷ್ಟು ಜನರ ಮೇಲೆ ನಡೆಸಿದ ಆಕ್ರಮಣವಾಗಿದೆ ಎಂದು ತಿಳಿಸಿದ್ದಾರೆ.
ಅವರು ರಾಜಸ್ಥಾನದಲ್ಲಿ ರೈತರ ಆಂದೋಲನ ಬೆಂಬಲಿಸಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿ, ಉತ್ತಮ ಭವಿಷ್ಯ ಖಚಿತಪಡಿಸಿಕೊಳ್ಳಲು ಅನ್ನದಾತಾ ಶಾಂತಿಯುತವಾಗಿ ಹೋರಾಡುತ್ತಿದ್ದಾನೆ. ನಾವು ಇಂಥ ಸಂದರ್ಭದಲ್ಲಿ ಅವನಿಗೆ ಬೆಂಬಲ ನೀಡುವುದನ್ನು ಮುಂದುವರೆಸುತ್ತೇವೆ ಎಂದರು.
ಇದು ಕೇವಲ ರೈತರ ಆಂದೋಲನವಲ್ಲ, ಇದು ದೇಶವಾಸಿಗಳೆಲ್ಲರ ಆಂದೋಲನವಾಗಿದೆ. ಸರಕಾರ ರೈತ ವಿರೋಧಿ ಕಾನೂನುಗಳನ್ನು ರದ್ದುಪಡಿಸುವುದು ಅನಿವಾರ್ಯ ಎಂದು ತಿಳಿಸಿದರು.
ರೈತರ ಶಾಂತಿಯುತ ಹೋರಾಟವನ್ನು ದಮನ ಮಾಡುವುದೇ ಬಿಜೆಪಿಯ ಅಚ್ಛೇ ದಿನ್‌ ಎಂದು ತಿಳಿಸಿದರು. ರೈತರ ಆಂದೋಲನ ಬೆಂಬಲಿಸಿ ೨ ದಿನಗಳ ರಾಜಸ್ಥಾನ ಪ್ರವಾಸದಲ್ಲಿರುವ ರಾಹುಲ್‌ ಗಾಂಧಿ ಹನುಮಾನ್‌ಗಢ ಹಾಗೂ ಶ್ರೀಗಂಗಾನಗರದಲ್ಲಿ ಶುಕ್ರವಾರ ರೈತರ ಸಭೆ ನಡೆಸಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಉತ್ತರ ಪ್ರದೇಶದ ಗೊಂಡಾದ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ನಿವಾಸದಲ್ಲಿ ದೆಹಲಿ ಪೊಲೀಸರು:12 ಜನರ ಹೇಳಿಕೆ ದಾಖಲು

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement