ಮೈತ್ರಿ ಸಹವಾಸ ಸಾಕಾಗಿದೆ: ಜೆಡಿಎಸ್‌ ಮುಖಂಡ ಬಂಡೆಪ್ಪ ಕಾಶಂಪೂರ

ಬೆಂಗಳೂರು: ಬೇರೆ ಪಕ್ಷದವರ ಜೊತೆ ಮೈತ್ರಿ ಸಾಕಾಗಿದೆ. ನಮಗೆ ಯಾರ ಸಹವಾಸವೂ ಬೇಡ ಎಂದು ಮಾಜಿ ಸಚಿವ ಬಂಡೆಪ್ಪ ಕಾಶಂಪೂರ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಜೆಡಿಎಸ್‌ ಸಮಾವೇಶದಲ್ಲಿ ಮೈತ್ರಿ ಸಹವಾಸ ಬೇಡ ಎಂದು ವರಿಷ್ಠರಿಗೆ ಮನವಿ ಮಾಡಿದ ಅವರು, ನಮಗೆ ಯಾರ ಸಹವಾಸವೂ ಬೇಡ. ಮುಂದಿನ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಗೆದ್ದು ಅಧಿಕಾರಕ್ಕೇರಲು ಶ್ರಮಿಸಬೇಕು ಎಂದರು.
ಕೆಲವರು ಜೆಡಿಎಸ್‌ ಎಲ್ಲಿದೆ ಎಂದು ಪ್ರಶ್ನಿಸುತ್ತಾರೆ. ಬೀದರ್‌ನಿಂದ ಚಾಮರಾಜನಗರವರೆಗೂ ಜೆಡಿಎಸ್‌ ಇದೆ. ವಿಧಾನಸೌಧದಲ್ಲಿ ಜೆಡಿಎಸ್ ಧ್ವಜ ಊರಲು ನಾವು ಪಣತೊಡಬೇಕು, 120 ಸ್ಥಾನಗಳನ್ನು ಗೆಲ್ಲಲು ನಾವು ಶ್ರಮಪಡಬೇಕು, ಶ್ರಮ ಹಾಕಿದ್ರೆ ಮುಂಬರುವ ಚುನಾವಣೆಯಲ್ಲಿ 120 ಸೀಟ್ ಗಳನ್ನು ಜೆಡಿಎಸ್ ಜಯಿಸಲು ಸಾಧ್ಯ ಎಂದು ತಿಳಿಸಿದರು.
ಕಾಂಗ್ರೆಸ್ 130 ರಿಂದ 78 ಸೀಟ್‌ಗಳಿಗೆ ಕುಸಿದಿದೆ. ಬಿಜೆಪಿ ಅವಧಿಯಲ್ಲಿ ಕೆಲಸಗಳಾಗುತ್ತಿಲ್ಲ, ಬಿಜೆಪಿ ಶಾಸಕರೇ ತಮ್ಮ ಕ್ಷೇತ್ರಗಳಿಗೆ ಹಣ ಕೊಡ್ತಿಲ್ಲ‌‌ ಅಂತ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಕಾಶಂಪೂರ ಅಭಿಪ್ರಾಯಪಟ್ಟರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement