ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ ಪ್ರಧಾನಿ: ಶಿವಸೇನೆ ಆರೋಪ

ಮುಂಬೈ: ಕೃಷಿ ಕಾನೂನುಗಳನ್ನು ಖಂಡಿಸಿ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರಧಾನಿ “ಆಂದೋಲನಜೀವಿಗಳುʼ ಎಂದು ಕರೆದಿರುವುವುದು ದೇಶದ ಸ್ವಾತಂತ್ರ್ಯ ಹೋರಾಟ ಮಾಡಿದವರಿಗೂ ಮಾಡಿದ ಅವಮಾನ ಎಂದು ಶಿವಸೇನೆ ಆರೋಪ ಮಾಡಿದೆ.
ಶಿವಸೇನೆ ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ, ಪ್ರಧಾನಿ ಮೋದಿ ಅವರು ದೇಶದ ಆಂದೋಲನಗಳನ್ನು ಗೇಲಿ ಮಾಡಿದ್ದಾರೆ. ಬಿಜೆಪಿ ತುರ್ತು ಪರಿಸ್ಥಿತಿಯಿಂದ ಅಯೋಧ್ಯೆ ಚಳುವಳಿಯವರೆಗೆ, ಹಣದುಬ್ಬರದಿಂದ ಕಾಶ್ಮೀರದಿಂದ ಆರ್ಟಿಕಲ್-370 ತೆಗೆದುಹಾಕುವವರೆಗೆ ತನ್ನ ಆಂದೋಲನವನ್ನು ಮುಂದುವರಿಸಿದೆ. ಇದೇ ಬಿಜೆಪಿಯ ಪ್ರಧಾನಿ ಮೋದಿ ಪ್ರತಿಭಟನಾಕಾರರನ್ನು ‘ಆಂದೋಲನಜೀವಿ’ ಎಂದು ಲೇವಡಿ ಮಾಡಿರುವುದು ಸ್ವಾತಂತ್ರ್ಯ ಚಳವಳಿಯನ್ನು ಸಹ ಅವಮಾನಿಸಿದಂತಾಗಿದೆ ಎಂದು ಹೇಳಿದೆ.
‘ಆಂದೋಲನಜೀವಿʼ ಎಂಬ ಪದವನ್ನು ಪ್ರಸ್ತಾಪಿಸಿದ ಪ್ರಧಾನಿ ಹೋರಾಟ ಮಾಡುತ್ತಿರುವ ಕಾರ್ಯಕರ್ತರನ್ನು ಅಪಹಾಸ್ಯ ಮಾಡಿದ್ದಾರೆ ಎಂದು ತಿಳಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಚಂದ್ರಯಾನ-3 : ವಿಕ್ರಂ ಲ್ಯಾಂಡರ್-ಪ್ರಜ್ಞಾನ ರೋವರ್ ಪುನಶ್ಚೇತನದ ಬಗ್ಗೆ ಇಸ್ರೋ ಹೇಳುವುದೇನು..?

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement