ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈಗ ಕೃಷಿ ಇಲಾಖೆ ಹೊಸ ರಾಯಭಾರಿ

posted in: ರಾಜ್ಯ | 0

ಬೆಂಗಳೂರು: ಕೃಷಿ ಇಲಾಖೆಯ ನೂತನ ರಾಯಭಾರಿಯಾಗಿ ಸ್ಯಾಂಡಲ್‌ವುಡ್‌ ನಟ ಚಾಲೆಂಜಿಂಗ್ ಸ್ಟಾರ್‌ ನಟ ದರ್ಶನ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೃಷಿ ಇಲಾಖೆಯು ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಚಾರ ಹಾಗೂ ಕೃಷಿಕರಲ್ಲಿ ಸ್ಪೂರ್ತಿ ತುಂಬಲು ಕನ್ನಡ ಚಲನಚಿತ್ರರಂಗದ ಪ್ರಸಿದ್ಧ ನಟರಾದ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಿಸಲಾಗಿದೆ. ಅವರು ಯಾವುದೇ ಸಂಭಾವನೆ ಇಲ್ಲದೆ ಹುದ್ದೆ ನಿರ್ವಹಿಸುವುದಾಗಿ ಒಪ್ಪಿಕೊಂಡಿರುತ್ತಾರೆ ಎಂದು ಕೃಷಿ ಇಲಾಖೆ ಪ್ರಕಟನೆ ತಿಳಿಸಿದೆ.
ಈ ಹಿಂದೆ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರು ನಟ ದರ್ಶನ್‌ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಆಗ ನಟ ದರ್ಶನ್‌ ಕೃಷಿ ಇಲಾಖೆಯ ರಾಯಭಾರಿಯಾಗಲು ಒಪ್ಪಿಕೊಂಡಿದ್ದರು. ಇದೀಗ ರಾಜ್ಯ ಸರಕಾರ ಅಧಿಕೃತ ಆದೇಶ ಹೊರಡಿಸಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ಇಂದಿನ ಪ್ರಮುಖ ಸುದ್ದಿ :-   ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ : ಕರಾವಳಿ ಜಿಲ್ಲೆಗಳಿಗೆ ಮುನ್ಸೂಚನೆ

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement