ಸಾಲ ಮರುಪಾವತಿ ವಿಫಲ: ಬಿ.ಆರ್‌.ಶೆಟ್ಟಿ ಆಸ್ತಿ ಮುಟ್ಟುಗೋಲಿಗೆ ಲಂಡನ್‌ ನ್ಯಾಯಾಲಯ ಆದೇಶ

ದುಬೈ: ದುಬೈನ ಬ್ಯಾಂಕ್‌ಗಳಿಂದ ಪಡೆದ ಸಾಲ ಮಾರುಪಾವತಿ ಮಾಡಲು ವಿಫಲವಾಗಿರುವ, ಕರ್ನಾಟಕ ಮೂಲಕ ದುಬೈ ಉದ್ಯಮಿ ಬಿ.ಆರ್ ಶೆಟ್ಟಿಯವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಎಂದು ಲಂಡನ್‌ ನ್ಯಾಯಾಲಯ ಆದೇಶಿಸಿದೆ.
ದುಬೈನ ದೊಡ್ಡ ಆರೋಗ್ಯ ಸೇವಾ ಕಂಪನಿಯಾಗಿರುವ ಎನ್‌ಎಂಸಿ ಹೆಲ್ತ್‌ ಕೇರ್‌ನ ಮಾಲೀಕರಾಗಿದ್ದ ಬಿ.ಆರ್‌ ಶೆಟ್ಟಿ, ಸಂಸ್ಥಾಪಕ ಖಲೀಫಾ ಅಲ್‌ ಮುಹೈರಿ ಹಾಗೂ ಸಯೀದ್ ಅಲ್‌ ಖುಬೈಸಿ, ಮಾಜಿ ಕಾರ್ಯ ನಿರ್ವಾಹಕ ಪ್ರಶಾಂತ್‌ ಮಂಗತ್‌ ಮತ್ತು ಇನ್ನಿಬ್ಬರು ಹಿರಿಯ ಅಧಿಕಾರಿಗಳ ಆಸ್ತಿಗಳ ಮುಟ್ಟುಗೋಲು ಹಾಕಲು ನ್ಯಾಯಾಲಯ ಆದೇಶ ಮಾಡಿದೆ.
ಲಂಡನ್‌ ನ್ಯಾಯಾಲಯದ ಈ ಆದೇಶದಿಂದಾಗಿ ಕೇರಳ ಸಹಿತ ವಿಶ್ವದ ವಿವಿಧ ಭಾಗಗಳಲ್ಲಿ ಇರುವ ಬಿ.ಆರ್‌ ಶೆಟ್ಟಿಗೆ ಸೇರಿದ ಆಸ್ತಿ ಬ್ಯಾಂಕ್‌ ಪಾಲಾಗಲಿದೆ. ಬಿ.ಆರ್ ಶೆಟ್ಟಿ ಒಡೆತನದ ಕಂಪನಿ ಬ್ಯಾಂಕ್‌ ಒಂದರಿಂದ ನಾಲ್ಕು ಬಿಲಿಯನ್‌ ಡಾಲರ್‌ಗೂ ಅಧಿಕ ಸಾಲ ಪಡೆದು ಹಿಂದಿರುಗಿಸಲು ವಿಫಲವಾಗಿತ್ತು. ಅಲ್ಲದೇ ನಕಲಿ ಹಣಕಾಸು ದಾಖಲೆಗಳನ್ನು ಒದಗಿಸುವ ಮೂಲಕ ಮೋಸ ಮಾಡಲಾಗಿದೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಬಿ.ಆರ್.ಶೆಟ್ಟಿ ಭಾರತಕ್ಕೆ ಬಂದಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಮತ್ತೆ 9000 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ ಅಮೆಜಾನ್

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement