ಯಡಿಯೂರಪ್ಪ ಕುಟುಂಬದ ಮಾರಿಷಿಸ್‌ ಪ್ರವಾಸದ ಗುಟ್ಟು ರಟ್ಟಾಗಬೇಕು: ಯತ್ನಾಳ

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಇತ್ತೀಚಿಗೆ ಮಾರಿಷಿಸ್‌ಗೆ ವಿಮಾನದಲ್ಲಿ ಯಾಕೆ ಹೋಗಿತ್ತು? ಅಲ್ಲಿ ಏನು ಹಣದ ವ್ಯವಹಾರ ನಡೆದಿದೆ ಎಂಬುದು ರಾಜ್ಯದ ಜನರಿಗೆ ತಿಳಿಯಬೇಕು ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಯತ್ನಾಳ ತಿಳಿಸಿದ್ದಾರೆ.
ಸತ್ಯ ಸಂಗತಿ ಜನರ ಎದುರು ಬರಬೇಕು ಎಂದು ಆಗ್ರಹಿಸಿದರು. ಯಡಿಯೂರಪ್ಪ ಅವರ ಕುಟುಂಬದ ಸದಸ್ಯರೇ ಅವರಿಗೆ ಹಾವು, ಚೇಳುಗಳಾಗಿ ಕಾಡುತ್ತಿದ್ದಾರೆ. ಯಡಿಯೂರಪ್ಪ ಮುಕ್ತವಾಗಿ ಕೆಲಸ ಮಾಡಲು ಅವರ ಪುತ್ರ ವಿಜಯೇಂದ್ರ ಬಿಡುತ್ತಿಲ್ಲ ಎಂದು ಆರೋಪ ಮಾಡಿದರು.
ಕುಟುಂಬದ ಸದಸ್ಯರಿಂದಲೇ ಯಡಿಯೂರಪ್ಪಗೆ ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ವಿಜಯೇಂದ್ರನ ಕೈಕಾಲು ಒತ್ತುವವರಿಗೆ, ಅವರ ಬೇಕು-ಬೇಡ ನೋಡಿಕೊಳ್ಳುವವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಲಾಗಿದೆ ಎಂದರು.
ಹಾವು, ಚೇಳುಗಳ ಮಧ್ಯೆ ಯಡಿಯೂರಪ್ಪ ಜೀವನ ನಡೆಸಬೇಕಾಗಿದೆ ಎಂದು ವಿಜಯೇಂದ್ರ ಹೇಳಿಕೆ ನೀಡಿದ ನಂತರ ಯತ್ನಾಳ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement