ಅಭಿವ್ಯಕ್ತಿ ಸ್ವಾತಂತ್ರ್ಯ ದಮನ: ಸರ್ಕಾರದ ವಿರುದ್ಧ ಪ್ರತಿಭಟನೆ ಅನಿವಾರ್ಯ

ಬೆಂಗಳೂರು: ಮುಕ್ತ ಅಭಿಪ್ರಾಯಗಳು ಹಾಗೂ ಅನಿಸಿಕೆಗಳನ್ನು ಮಟ್ಟಹಾಕಲು ಸರಕಾರಗಳು ಪ್ರಯತ್ನಿಸುತ್ತಿದ್ದು, ಸರಕಾರಗಳ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಬೆಂಗಳೂರಿನ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನವನ್ನು ಖಂಡಿಸಿದ ಶಿವಕುಮಾರ, ಇದು ಇಡೀ ಯುವ ಸಮುದಾಯಕ್ಕೆ ಎಚ್ಚರಿಕೆಯ ಗಂಟೆ ಎಂದರು.
ದಿಶಾ ರವಿ ಬಂಧನದಿಂದ ದೇಶದ ಯುವ ಸಮುದಾಯ ದಿಗ್ಭ್ರಮೆಗೊಳಗಾಗಿದೆ. ನಮಗೆ ಸಂವಿಧಾನ ವಾಕ್‌ ಸ್ವಾತಂತ್ರ್ಯ ನೀಡಿದೆ. ಯುವಕರು ಮುಕ್ತ ಅಭಿಪ್ರಾಯ ವ್ಯಕ್ತಪಡಿಸದಂತೆ ಬಾಯಿ ಮುಚ್ಚಿಸಲು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಯತ್ನಿಸುತ್ತಿರುವುದು ಖಂಡನೀಯ ಎಂದು ತಿಳಿಸಿದರು.
ರಾಜ್ಯ ಹಾಗೂ ಕೇಂದ್ರ ಸರಕಾರಗಳು ಪ್ರಜಾಪ್ರಭುತ್ವ ಧೋರಣೆ ಅನುಸರಿಸುತ್ತಿವೆ. ಯುವಕರ ಧ್ವನಿ ದೇಶದ ಧ್ವನಿ. ಯುವಕರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕು ಎಂದರು.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement