ಬೆಂಗಳೂರು: ಕೋವಿಡ್ ಮಾರ್ಗಸೂಚಿಯನ್ವಯ 9 ರಿಂದ ದ್ವಿತೀಯ ಪಿಯುಸಿ ವರೆಗೆ ತರಗತಿಗಳನ್ನು ಆರಂಭಿಸಿರುವ ರಾಜ್ಯ ಸರ್ಕಾರ, ಇದೀಗ ಉಳಿದ ತರಗತಿಗಳ ಆರಂಭಕ್ಕೆ ಅನಮತಿ ನೀಡಿದೆ.
ಫೆ.22ರಿಂದ 6ರಿಂದ 8 ನೇ ತರಗತಿ ವರೆಗೆ ಪೂರ್ಣ ಪ್ರಮಾಣದಲ್ಲಿ ತರಗತಿ ಶುರುವಾಗಲಿದೆ. 1ರಿಂದ5 ನೇ ತರಗತಿ ವರೆಗೆ ವಿದ್ಯಾಗಮ ಪ್ರಾರಂಭವಾಗಲಿದೆ.
ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ರಾಜ್ಯ ಕೊರೊನಾ ತಾಂತ್ರಿಕ ಸಲಹಾ ಸಮಿತಿ ಜತೆ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆ ಬಳಿಕ ಸಚಿವ ಸುರೇಶ್ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಫೆ.22ರಿಂದ 6,7 ಮತ್ತು 8ನೇ ತರಗತಿ ಮಕ್ಕಳಿಗೆ ಶಾಲೆಯಲ್ಲಿ ಪೂರ್ಣ ಪ್ರಮಾಣದ ತರಗತಿ ಆರಂಭ ಆಗಲಿದೆ. ಆದರೆ, ಬೆಂಗಳೂರು ನಗರ ಹಾಗೂ ಕೇರಳ ಗಡಿ ಭಾಗದ ಪ್ರದೇಶಗಳಲ್ಲಿ 6 ಮತ್ತು 7ನೇ ತರಗತಿ ವಿಲ್ಲ. 8ನೇ ತರಗತಿ ಮಾತ್ರ ಆರಂಭ ಆಗಲಿದೆ ಎಂದು ತಿಳಿಸಿದ್ದಾರೆ.
ಮಕ್ಕಳಿಗೆ ಶಾಲಾ ಹಾಜರಾತಿ ಕಡ್ಡಾಯವಿಲ್ಲ. ಆನ್ಲೈನ್ ತರಗತಿಗಳು ಎಂದಿನಂತೆ ಮುಂದುವರಿಯಲಿದೆ. ಶಾಲೆ ಆರಂಭಕ್ಕೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ತಜ್ಞರ ಸಮಿತಿ ಕಟ್ಟು ನಿಟ್ಟಿನ ಸಲಹೆ ನೀಡಿದೆ. ಯಾವುದೇ ಕಾರಣಕ್ಕೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ವರದಿ ಕಾರ್ಡ್ ಕಡ್ಡಾಯ. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಹಾಸ್ಟೆಲ್ಗಳು ಆರಂಭವಾಗಲಿವೆ. ವಿದ್ಯಾರ್ಥಿಗಳ ಅಗತ್ಯತೆಗೆ ತಕ್ಕಂತೆ ಹೆಚ್ಚು ಬಸ್ಗಳನ್ನು ಓಡಿಸಬೇಕೆಂದು ಸಾರಿಗೆ ಇಲಾಖೆಗೆ ಮನವಿ ಮಾಡಲಾಗಿದೆ. ಜಿಲ್ಲೆಗಳಲ್ಲಿ ಮಕ್ಕಳು ಮತ್ತು ಶಿಕ್ಷಕರಿಗೆ ರೇಂಡಮ್ ಟೆಸ್ಟ್ ಮಾಡಿಸುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದರು.
ಸಭೆಯಲ್ಲಿ ತಜ್ಞರ ಸಮಿತಿಯ ಡಾ.ಸುದರ್ಶನ ಬಲ್ಲಾಳ್ ಸೇರಿ ಸಮಿತಿ ಸದಸ್ಯರು, ಶಿಮೊದಲಾದವರಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ