ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ: ಸಿದ್ದರಾಮಯ್ಯ

ಸದ್ಯ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರ ವಿವಾದಿತವಾಗಿರುವುದರಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಕೇಳಲು ನನ್ನ ಬಳಿಯೂ ಬಂದಿದ್ದರು. ಆದರೆ ವಿವಾದಿತ ಮಂದಿರಕ್ಕೆ ಹಣ ಕೊಡುವುದಿಲ್ಲ ಎಂದು ಹೇಳಿ ಅವರನ್ನು ಹಿಂದೆ ಕಳುಹಿಸಿದ್ದೇನೆ ಎಂದು ಹೇಳಿದ್ದಾರೆ.
ಅಲ್ಲದೇ ಒಂದು ವೇಳೆ ಬೇರೆ ಕಡೆ ರಾಮ ಮಂದಿರ ನಿರ್ಮಾಣ ಮಾಡಿದ್ದರೆ ಅದಕ್ಕೆ ದೇಣಿಗೆ ನೀಡುತ್ತಿದ್ದೆ ಎಂದ ಸಿದ್ದರಾಮಯ್ಯ ಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿರುವುದರ ಬಗ್ಗೆ ಟೀಕೆ ಮಾಡಿರುವ ಅವರು ಸಂಗ್ರಹ ಮಾಡುತ್ತಿರುವ ಹಣದ ಲೆಕ್ಕ ಯಾರು ಕೊಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.
ಹಿಂದೆ ರಾಮ ಮಂದಿರ ನಿರ್ಮಾಣಕ್ಕೆಂದು ಹಣ ಹಾಗೂ ಇಟ್ಟಿಗೆ ಸಂಗ್ರಹಿಸಿದ್ದರು. ಆದರೆ ಇಟ್ಟಿಗೆಯನ್ನು ಊರಾಚೆ ಎಸೆದು, ಹಣ ಮಾತ್ರ ತೆಗೆದುಕೊಂಡು ಹೋಗಿದ್ದರು. ಇದೆಲ್ಲಾ ರಾಮನ ಲೆಕ್ಕ ಕೃಷ್ಣನ ಲೆಕ್ಕ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.
ಮಂದಿರಕ್ಕೆ ದೇಣಿಗೆ ನೀಡಿದವರ ಮನೆಗೆ ಗುರುತು ಮಾಡಲಾಗುತ್ತಿದೆ ಎನ್ನುವ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಬಹುಶಃ ಅವರ ಮನೆಗೆ ಗುರುತು ಮಾಡಿರಬೇಕು. ಹೀಗಾಗಿ ಆ ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement