ಬಸ್‌ ಪ್ರಯಾಣ ದರ ಹೆಚ್ಚಳವಿಲ್ಲ: ಸಾರಿಗೆ ಸಚಿವ ಸವದಿ

ಡೀಸೆಲ್‌ ಬೆಲೆ ಹೆಚ್ಚಳಗೊಂಡಿದ್ದರೂ ಬಸ್‌ ಪ್ರಯಾಣ ದರವನ್ನು ಹೆಚ್ಚಿಸುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಬಸ್‌ ಪ್ರಯಾಣ ದರ ಹೆಚ್ಚಿಸುವಂತೆ ಈಗಾಗಲೇ ಸಾರಿಗೆ ಸಂಸ್ಥೆಗಳಿಂದ ಪ್ರಸ್ತಾಪ ಬಂದಿದೆ. ಆದರೆ ಕೊರೊನಾ, ನೈಸರ್ಗಿಕ ವಿಕೋಪದ ಕಾರಣದಿಂದಾಗಿ ಈಗಾಗಲೇ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಬಸ್‌ ಪ್ರಯಾಣ ದರ ಹೆಚ್ಚಿಸಿದರೆ ಜನರಿಗೆ ಇನ್ನಷ್ಟು ತೊಂದರೆ ಕೊಟ್ಟಂತೆ ಆಗುತ್ತದೆ ಎಂದರು.
ಸದ್ಯ ಶೇ.90ರಷ್ಟು ಬಸ್‌ಗಳು ಸಂಚರಿಸುತ್ತಿದ್ದು, ಎಪ್ರಿಲ್‌ ತಿಂಗಳ ಅಂತ್ಯಕ್ಕೆ ಸಹಜ ಸ್ಥಿತಿ ಬರುವ ಸಾಧ್ಯತೆಯಿದೆ. ಈ ಬಾರಿಯ ಬಜೆಟ್‌ನಲ್ಲಿ ಈಶಾನ್ಯ, ವಾಯವ್ಯ ಹಾಗೂ ಕೆಎಸ್‌ಆರ್‌ಟಿಸಿಗೆ ತಲಾ 1000 ಬಸ್‌ಗಳನ್ನು ನೀಡಲಾಗುವುದು. ಹಳೆಯ ಬಸ್‌ಗಳನ್ನು ಗುಜರಿಗೆ ಹಾಕದೇ ಅವುಗಳನ್ನು ಶೌಚಾಲಯ, ಡೇ ಕೇರ್‌ ಸೆಂಟರ್‌, ಹಾಲುಣಿಸುವ ಮಹಿಳಾ ಕೇಂದ್ರಗಳನ್ನಾಗಿ ರೂಪಿಸುವ ಉದ್ದೇಶವಿದೆ ಎಂದು ಸಚಿವ ಸವದಿ ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಉರಿಗೌಡ, ನಂಜೇಗೌಡ ಸಿನೆಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement