ಸಿದ್ದರಾಮಯ್ಯ, ನಟ ಯಶ್‌ ಅಂತ್ಯಕ್ರಿಯೆಗೆ ಬರಬೇಕೆಂದು ಡೆತ್‌ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡ ಯುವಕ

ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಚಿತ್ರ ನಟ ಯಶ್‌ ಆಗಮಿಸಬೇಕು ಎಂದು ಡೆತ್ ‌ನೋಟ್‌ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಂಡ್ಯ ತಾಲೂಕ ಕೆರೆಗೋಡು ಹೋಬಳಿ ಕೊಡಿದೊಡ್ಡಿ ಗ್ರಾಮದ ಯುವಕ ಕೃಷ್ಣ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂತ್ಯಕ್ರಿಯೆ ವೇಳೆ ತನ್ನ ಮೊಬೈಲ್‌ನ್ನು ಚಿತೆಯಲ್ಲಿ ಹಾಕುವಂತೆ ಡೆತ್‌ನೋಟ್‌ನಲ್ಲಿ ತಿಳಿಸಿದ್ದಾನೆ.
ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಡಿದೊಡ್ಡಿ ಗ್ರಾಮಕ್ಕೆ ಆಗಮಿಸಲಿದ್ದಾರೆ.
ಯುವಕ ಕೃಷ್ಣ ಬರೆದಿರುವ ಡೆತ್‌ನೋಟ್‌ನಲ್ಲಿ ನನ್ನನ್ನು ಎಲ್ಲರೂ ಕ್ಷಮಿಸಿ. ತಾಯಿಗೆ ತಕ್ಕ ಮಗನಾಗಲಿಲ್ಲ, ಅಣ್ಣನಿಗೆ ತಕ್ಕ ತಮ್ಮನಾಗಲಿಲ್ಲ, ಸ್ನೇಹಿತರಿಗೆ ಒಳ್ಳೆಯ ಸ್ನೇಹಿತನಾಗಲಿಲ್ಲ, ಹುಡುಗಿಗೆ ಒಳ್ಳೆ ಹುಡುಗನಾಗಲಿಲ್ಲ ಎಂದು ಬರೆದಿದ್ದಾನೆ. ಜೊತೆಗೆ ನಟ ಯಶ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತನ್ನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಬೇಕು ಎಂದು ಯುವಕ ಡೆತ್‌ನೋಟ್‌ನಲ್ಲಿ ಕೋರಿದ್ದಾನೆ.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement