ರಾಜ್ಯದಲ್ಲಿ ೨ನೇ ಹಂತದ ಕೊರೊನಾ ಅಲೆ ಶಂಕೆ: ಕಟ್ಟೆಚ್ಚರಕ್ಕೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಕೊರೊನಾ ಅಲೆ ಆರಂಭವಾಗುವ ಸಾಧ್ಯತೆ ಇದೆ ಹೀಗಾಗಿ ಕೇರಳ, ಮಹಾರಾಷ್ಟ್ರದ ಗಡಿ ಜಿಲ್ಲೆ ಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ‌ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಪತ್ರ ಬರೆಯಲಾಗಿದೆ.‌ ನಾಳೆ ಗಡಿ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸರ್ಕಾರ ವಿಡಿಯೋ ಸಂವಾದ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ವಿವಿಧ ಅಭಿವೃದ್ದಿ ಯೋಜನೆಗೆ ಚಾಲನೆ ಮಾಡಿ ಮಾತಾನಾಡಿದ ಅವರು ಈಗಾಗಲೇ ಈ ಬಗ್ಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ.‌ ಹೊರ ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಆರ್ ಟಿಪಿಸಿಆರ್ ನೆಗಟಿವ್ ವರದಿ ಕಡ್ಡಾಯ. ಇಲ್ಲವಾದಲ್ಲಿ ಇಲ್ಲಿ ಟೆಸ್ಟ್ ಮಾಡಿಸಲೇ ಬೇಕು ಎಂದು ಅವರು ತಿಳಿಸಿದರು.
ಕೊರೊನಾ ಹೋಗಿದೆ ಎಂದು ಜನರು ಮೈಮರೆತು ಸಮಸ್ಯೆಯನ್ನು ಮೈ ಮೇಲೆ ಎಳೆದುಕೊಳ್ಳಬಾರದು. ಈ ಬಗ್ಗೆ ಎಚ್ಚರವಾಗಿರಬೇಕು.ಕೊರೊನಾ ಇನ್ನೂ ಹೋಗಿಲ್ಲ,, ನಮ್ಮ ಮಧ್ಯೆಯಿದೆ ಎಂದು ತಿಳಿಸಿದ್ದಾರೆ.

 

ಇಂದಿನ ಪ್ರಮುಖ ಸುದ್ದಿ :-   ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ; ಇಬ್ಬರ ವಿರುದ್ಧ ದೂರು ದಾಖಲು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement