ಕೇರಳದಿಂದ ಬೆಂಗಳೂರಿಗೆ ಬರುವವರಿಗೆ ಕೊರೊನಾ ವರದಿ ತರುವುದು ಕಡ್ಡಾಯ

posted in: ರಾಜ್ಯ | 0

ಬೆಂಗಳೂರು: ಕೇರಳದಿಂದ ಬೆಂಗಳೂರಿಗೆ ಬರುವವರು ಕೊರೊನಾ ನೆಗೆಟಿವ್‌ ವರದಿ ತರುವುದು ಕಡ್ಡಾಯ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ ತಿಳಿಸಿದ್ದಾರೆ.
ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಕೇರಳದಿಂದ ಬಂದವರಿಗೆ ಕೊವಿಡ್‌-೧೯ ಪರೀಕ್ಷೆ ಆಗಿದೆಯೇ ಎಂಬುದನ್ನು ಉದ್ಯೋಗದಾತ ಕಂಪನಿಗಳು, ವಾಸವಿರುವ ಅಪಾರ್ಟಮೆಂಟ್‌ ಮಾಲಿಕರ ಜವಾಬ್ದಾರಿ. ಕೊರೊನಾ ಪರೀಕ್ಷೆ ಮಾಡಿಸದೇ ಬರುವವರಿಗೆ ಕೆಲಸ ಮಾಡಲು ಅಥವಾ ಉಳಿದುಕೊಳ್ಳಲು ಅವಕಾಶ ನೀಡಿದರೆ ಸಂಸ್ಥೆಯ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದರು.
ಒಂದು ವೇಳೆ ಪರೀಕ್ಷೆಗೊಳಗಾಗದೇ ನಗರಕ್ಕೆ ಬಂದರೆ ಅಂಥವರನ್ನು ಕ್ವಾರಂಟೈನ್‌ನಲ್ಲಿಟ್ಟು ಪರೀಕ್ಷೆ ನಡೆಸಲಾಗುವುದು. ಕೊರೊನಾ ಸೋಂಕು ಇಲ್ಲ ಎಂಬುದು ದೃಢಪಟ್ಟ ನಂತರ ಕಳಿಸಲಾಗುವುದು. ಮಹಾರಾಷ್ಟ್ರದಿಂದ ಸೋಂಕು ಹರಡದಂತೆ ತಡೆಯಲು ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ದಿ ಹಿಂದೂ ಸಂಗೀತ ಸ್ಪರ್ಧೆ: ಬಾಲಪ್ರತಿಭೆ ವಿಭಾಗದಲ್ಲಿ ಕುಮಟಾದ ಅದಿತಿ ಶಾನಭಾಗ ಪ್ರಥಮ

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement