ಕೊರೊನಾ ಲಸಿಕೆ ಪಡೆಯಲು ಆರೋಗ್ಯ ಸಿಬ್ಬಂದಿ ನಿರಾಸಕ್ತಿ:ಸುಧಾಕರ ಬೇಸರ

ಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ಆರೋಗ್ಯ ಸಿಬ್ಬಂದಿ, ವೈದ್ಯರೇ ಹಿಂದೇಟು ಹಾಕುತ್ತಿರುವುದು ಲಸಿಕೆ ಅಭಿಯಾನಕ್ಕೆ ಸವಾಲಾಗಿ ಪರಿಣಮಿಸಿದೆ ಎಂದು ಕರ್ನಾಟಕದ ಆರೋಗ್ಯ ಸಚಿವ ಡಾ. ಕೆ. ಸುಧಾಕರ ತಿಳಿಸಿದ್ದಾರೆ.
ಲಸಿಕೆ ಅಭಿಯಾನ ಆರಂಭಗೊಂಡ ನಂತರ ಈವರೆಗೆ ನೋಂದಾಯಿತರಲ್ಲಿ ಶೇ. 51 ರಷ್ಟು ಮಂದಿ ಮಾತ್ರ ಲಸಿಕೆ ಪಡೆದುಕೊಂಡಿದ್ದಾರೆ. ಇದು ಅಭಿಯಾನದ ಯಶಸ್ಸಿನ ಬಗ್ಗೆ ಸಂದೇಹ ಮೂಡಿಸುತ್ತದೆ. ಮುಂದಿನ ದಿನಗಳಲ್ಲಿ ಆತಂಕ ಬಿಟ್ಟು ಲಸಿಕೆ ಪಡೆದುಕೊಳ್ಳುವಂತೆ ಆರೋಗ್ಯ ಸಿಬ್ಬಂದಿ ಹಾಗೂ ಕೋವಿಡ್ ವಾರಿಯರ್ಸ್‌ಗಳಿಗೆ ಸಚಿವರು ಕೋರಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಶೇ. 25 ಸಿಬ್ಬಂದಿ ಮಾತ್ರ ಲಸಿಕೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳನ್ನು ನಂಬಬೇಡಿ. ಕೋವಿಡ್ ಲಸಿಕೆ ಸುರಕ್ಷಿತವಾಗಿದೆ. ಇದರಿಂದ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳು, ತಜ್ಞ ವೈದ್ಯರು ಲಸಿಕೆ ಪಡೆದುಕೊಂಡಿದ್ದಾರೆ. ಎಂದರು.
ಲಸಿಕೆ ತೆಗೆದುಕೊಂಡವರಿಗೆ ಸೋಂಕು ಬರಬಹುದು, ಆದರೆ ಅಂಥವರ ಸಾವಿನ ಪ್ರಮಾಣ ತುಂಬಾ ಕಡಿಮೆಯಿದೆ. ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ವೈದ್ಯರು, ನರ್ಸ್, ಪ್ಯಾರಾ ಮೆಡಿಕಲ್ ಸಿಬ್ಬಂದಿ ಲಸಿಕೆ ತೆಗೆದುಕೊಳ್ಳಬೇಕು, ಅವರೇ ಲಸಿಕೆ ತೆಗೆದುಕೊಳ್ಳದಿದ್ರೆ ಸಾಮಾನ್ಯರು ಲಸಿಕೆ ಪಡೆಯಲು ಮುಂದೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement