ಮಥುರಾ: ಶ್ರೀಕೃಷ್ಣನ ಜನ್ಮಸ್ಥಳ ಮಥುರಾದ ದೇವಾಲಯದ ಪಕ್ಕದ ೧೭ನೇ ಶತಮಾನದ ಮಸೀದಿಯನ್ನು ಸ್ಥಳಾಂತರಿಸುವಂತೆ ಕೋರಿ ಸ್ಥಳಿಯ ನ್ಯಾಯಾಲಯದಲ್ಲಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಅರ್ಜಿಗಳ ವಿಚಾರಣೆಗೆ ನ್ಯಾಯಾಲಯ ದಿನಾಂಕವನ್ನೂ ನಿಗದಿಪಡಿಸಿದೆ.
ಸಿವಿಲ್ ನ್ಯಾಯಾಧೀಶ ನೇಹಾ ಬನೌಡಿಯಾ ಮಾರ್ಚ್ ೧೦ಕ್ಕೆ ವಿಚಾರಣೆ ನಡೆಸಲಿದ್ದಾರೆ. ವಕೀಲ ಶೈಲೇಂದ್ರ ಸಿಂಗ್ ಮತ್ತು ಹಿಂದೂ ಸೇನಾ ಮುಖ್ಯಸ್ಥ ಮನೀಶ್ ಯಾದವ್ ಅರ್ಜಿ ಸಲ್ಲಿಸಿದ್ದಾರೆ. ಮಥುರಾದ ಕತ್ರ ಕೇಶವದೇವ ದೇವಸ್ಥಾನದ ೧೩.೩೭ ಎಕರೆ ಭೂಮಿಯಲ್ಲಿ ಶಾಹಿ ಈದಗಾ ಮಸೀದಿಯನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವವರು ೧ ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ