ಕಾಂಗ್ರೆಸ್ ಮಾಜಿ ನಾಯಕ ಸಂಜಯ್ ಝಾ ಪುದುಚೇರಿ ಸರ್ಕಾರದ ಪತನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ನಲ್ಲಿ ನಾಯಕತ್ವ, ಉತ್ಸಾಹ ಯಾವುದೂ ಇಲ್ಲ ಎಂದು ಟೀಕಿಸಿದ್ದಾರೆ.
ಅತ್ಯಂತ ಸಣ್ಣ ಪ್ರದೇಶವಾದ ಪುದುಚೇರಿಯಲ್ಲಿ ಸಹ ಕಾಂಗ್ರೆಸ್ ಸರ್ಕಾರದ ಪತನವು ಅತ್ಯಂತ ಹಳೆಯ ಪಕ್ಷಕ್ಕೆ ಹೇಗೆ ಉತ್ಸಾಹವಿಲ್ಲ ಎಂಬುದನ್ನು ತೋರಿಸುತ್ತದೆ. ಅದಕ್ಕೆ ಹಸಿವೂ ಇಲ್ಲ. ನಾಯಕತ್ವವೂ ಇಲ್ಲ” ಎಂದು ಝಾ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಬಿಜೆಪಿಯ ಆಪರೇಷನ್ ಲೋಟಸ್ ಅನೈತಿಕ. ಆದರೆ ಕಾಂಗ್ರೆಸ್ಸಿಗರು ಅಮೆಜಾನ್ನಲ್ಲಿ ಸುಲಭವಾಗಿ ಸಿಗುವ ರಿಯಾಯಿತಿ ಟಾಯ್ಲೆಟ್ ಪೇಪರ್ನಂತೆ ಏಕೆ ಮಾರ್ಪಟ್ಟಿದ್ದಾರೆ” ಎಂದು ಅವರು ಪ್ರಶ್ನಿಸಿದ್ದಾರೆ.
ಪುದುಚೇರಿ ಮುಖ್ಯಮಂತ್ರಿ ವಿ ನಾರಾಯಣಸಾಮಿ ವಿಧಾನಸಭೆಯಲ್ಲಿ ನಡೆದ ವಿಶ್ವಾಸಾರ್ಹ ಮತದಾನಕ್ಕೆ ಮುಂಚಿತವಾಗಿ ರಾಜೀನಾಮೆ ನೀಡಿದರು, ನಾರಾಯಣಸಾಮಿ ಅವರು ಲೆಫ್ಟಿನೆಂಟ್ ಗವರ್ನರ್ ತಮಿಳುಸಾಯಿ ಸೌಂದರರಾಜನ್ ಅವರನ್ನು ಭೇಟಿಯಾಗಿ ತಮ್ಮ ನಾಲ್ಕು ಸದಸ್ಯರ ಸಂಪುಟದ ರಾಜೀನಾಮೆಯನ್ನು ಏಪ್ರಿಲ್-ಮೇನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಸಲ್ಲಿಸಿದರು.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ