ತಮಿಳುನಾಡು ಕಾವೇರಿ-ವೆಲ್ಲಾರು-ಗುಂಡಾರು ನದಿ ಜೋಡಣೆ ಯೋಜನೆ ಕೈಬಿಡಬೇಕು: ಸಿದ್ದು ಆಗ್ರಹ

ತಮಿಳುನಾಡು ಕೈಗೊಂಡಿರುವ ಕಾವೇರಿ-ವೆಲ್ಲಾರು-ವೈಗೈ-ಗುಂಡಾರು ನದಿ ಜೋಡಣೆ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ತಮಿಳುನಾಡು ಸರಕಾರ ಕಾವೇರಿ ನದಿಯ ೪೫ ಟಿಎಂಸಿ ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡು ಕೈಗೊಂಡಿರುವ ನದಿ ಜೋಡಣೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ವಿಚಾರವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು ಅಲ್ಲದೇ ತಮಿಳುನಾಡು ಸಿಎಂಗೆ ಪತ್ರ ಬರೆದು ಯೋಜನೆ ನಿಲ್ಲಿಸುವಂತೆ ಒತ್ತಾಯಿಸಬೇಕು ಎಂದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ನಿಮ್ಮ ಕಾಮೆಂಟ್ ಬರೆಯಿರಿ

advertisement