ತಮಿಳುನಾಡು ಕೈಗೊಂಡಿರುವ ಕಾವೇರಿ-ವೆಲ್ಲಾರು-ವೈಗೈ-ಗುಂಡಾರು ನದಿ ಜೋಡಣೆ ಯೋಜನೆಯನ್ನು ಕೂಡಲೇ ಕೈಬಿಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ತಮಿಳುನಾಡು ಸರಕಾರ ಕಾವೇರಿ ನದಿಯ ೪೫ ಟಿಎಂಸಿ ನೀರನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡು ಕೈಗೊಂಡಿರುವ ನದಿ ಜೋಡಣೆಯನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದು ಆಗ್ರಹಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ವಿಚಾರವನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಬೇಕು ಅಲ್ಲದೇ ತಮಿಳುನಾಡು ಸಿಎಂಗೆ ಪತ್ರ ಬರೆದು ಯೋಜನೆ ನಿಲ್ಲಿಸುವಂತೆ ಒತ್ತಾಯಿಸಬೇಕು ಎಂದರು.
ನಿಮ್ಮ ಕಾಮೆಂಟ್ ಬರೆಯಿರಿ