ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್‌ಗಳಿಗೆ ಪರ್ಮಿಟ್‌ ಇದೆ

ಬೆಳಗಾವಿ: ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಚರಿಸುವ ಎಲ್ಲ ಬಸ್‌ಗಳಿಗೂ ಪರ್ಮಿಟ್‌ ಇದ್ದು, ಯಾವುದೇ ಬಸ್‌ಗಳು ಅನಧಿಕೃತವಾಗಿ ಸಂಚಾರ ಮಾಡುತ್ತಿಲ್ಲ ಎಂದು ಬೆಳಗಾವಿ ಕೆಎಸ್‌ಆರ್‌ಟಿಸಿ ಡಿಸಿ ಎಂ.ಆರ್‌.ಮುಂಜಿ ತಿಳಿಸಿದ್ದಾರೆ.

ನಮ್ಮ ಸಾರಿಗೆ ಬಸ್‌ಗಳು ಶುಚಿಯಾಗಿವೆ. ಇದರಿಂದಾಗಿ ಹೆಚ್ಚಿನ ಪ್ರಯಾಣಿಕರು ನಮ್ಮ ಬಸ್‌ಗಳಲ್ಲಿ ಪ್ರಯಾಣಿಸಲು ಬಯಸುತ್ತಾರೆ. ಇದನ್ನು ಸಹಿಸದ ಮಹಾರಾಷ್ಟ್ರ ಸಾರಿಗೆ ಅಧಿಕಾರಿಗಳು ಅಸಮಾಧಾನದಿಂದ ಶಿವಸೇನೆ ಪತ್ರವನ್ನು ಉಲ್ಲೇಖಿಸಿ ನಮಗೆ ಪತ್ರ ಬರೆದಿದ್ದಾರೆ. ಸಾಂಗ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಬರೆದಿರುವ ಪತ್ರವನ್ನು ಪರಿಶೀಲಿಸಲಾಗಿದೆ. ನಮ್ಮ ಬಸ್‌ಗಳು ಶುಚಿಯಾಗಿರುವುದನ್ನು ಸಹಿಸಿಕೊಳ್ಳಲು ಅವರಿಗೆ ಸಾಧ್ಯವಾಗುತ್ತಿಲ್ಲ. ಅಲ್ಲಿಂದ ಬರುವ ಪ್ರಯಾಣಿಕರು ನಮ್ಮ ಬಸ್‌ಗಳಲ್ಲಿ ಪ್ರಯಾಣ ಮಾಡುತ್ತಾರೆ. ಇದರಿಂದ ಅಸಮಾಧಾನಗೊಂಡ ಸಾಂಗ್ಲಿ ಸಾರಿಗೆ ಅಧಿಕಾರಿಗಳು ಶಿವಸೇನೆ ಪತ್ರ ಉಲ್ಲೇಖಿಸಿ ನಮಗೆ ಪತ್ರ ಬರೆದಿದ್ದಾರೆ.

ಶಿವಸೇನೆ ಫೆ.೨೩ರಂದು ನಮ್ಮ ಬಸ್‌ಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕೊರೊನಾ ಪರೀಕ್ಷೆ ವರದಿ ತಂದವರಿಗೆ ಮಾತ್ರ ನಮ್ಮ ಬಸ್‌ಗಳಲ್ಲಿ ಸಂಚರಿಸಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದರು,

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ಪ್ರಸ್ತುತ ನಮ್ಮ ರಾಜ್ಯದಿಂದ ಮಹಾರಾಷ್ಟ್ರಕ್ಕೆ ೩೪೦ ಬಸ್‌ಗಳು ಕಾರ್ಯಾಚರಣೆ ಮಾಡುತ್ತಿದ್ದು, ಅದರಲ್ಲಿ ೬೦ ಬಸ್‌ಗಳು ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ಬರುತ್ತವೆ. ಬಸ್‌ನಲ್ಲಿ ಪ್ರಯಾಣ ಮಾಡುವವರು ಸ್ಯಾನಿಟೈಜರ್‌, ಮಾಸ್ಕ್‌ ಬಳಕೆ ಮಾಡಬೇಕು. ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಕೋರಿದರು.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement