ಮಹಾರಾಷ್ಟ್ರ ಸಚಿವ ಛಗನ್‌ ಭುಜಬಲ್‌ಗೆ ಕೊರೊನಾ ಸೋಂಕು

ಮಹಾರಾಷ್ಟ್ರ ಸಚಿವ ಛಗನ್‌ ಭುಜಬಲ್‌ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ತಮ್ಮ ಟ್ವೀಟರ್‌ನಲ್ಲಿ ಬರೆದುಕೊಂಡಿದ್ದಾರೆ.
ಕಳೆದ ೨-೩ ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಕೊವಿಡ್‌-೧೯ ಪರೀಕ್ಷೆ ಮಾಡಿಸಿಕೊಳ್ಳಬೇಕು. ನನ್ನ ಆರೋಗ್ಯ ಉತ್ತಮವಾಗಿದ್ದು, ನಾಗರಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 14,199 ಜನರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳು 1.5 ಲಕ್ಷಕ್ಕಿಂತ ಹೆಚ್ಚಾಗಿದೆ, ಇದು ಮೂರು ವಾರಗಳ ಹಿಂದೆ ಕಂಡುಬಂದ ಮಟ್ಟವಾಗಿದೆ. ಈವರೆಗೆ 1.11 ಕೋಟಿಗೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ.
ಕೇರಳ, ಮಹಾರಾಷ್ಟ್ರ, ಪಂಜಾಬ್, ಛತ್ತಿಸಗಢ ಮತ್ತು ಮಧ್ಯಪ್ರದೇಶಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ಲಸಿಕೆಯ ದ್ವಿತಿಯ ಅಭಿಯಾನ ಮಾರ್ಚ್‌ ಮೊದಲ ವಾರದಲ್ಲಿ ಆರಂಭಗೊಳ್ಳಲಿದ್ದು, ೫೦ ವರ್ಷಗಳಿಗೆ ಮೇಲ್ಪಟ್ಟ ವ್ಯಕ್ತಿಗಳಿಗೆ ಲಸಿಕೆ ಹಾಕಲಾಗುವುದು. ಮಹಾರಾಷ್ಟ್ರದ ಐದು ಜಿಲ್ಲೆಗಳಾದ ಅಮರಾವತಿ, ಅಕೋಲಾ, ಯವತ್ಮಾಲ್, ಬುಲ್ಡಾನಾ ಮತ್ತು ವಾಶಿಮ್‌ ಗಳಲ್ಲಿ ಕಟ್ಟುನಿಟ್ಟಾದ ನಿರ್ಬಂಧಗಳನ್ನು ವಿಧಿಸಿದೆ.

ಇಂದಿನ ಪ್ರಮುಖ ಸುದ್ದಿ :-   ಚಂದ್ರಯಾನ-3 : ವಿಕ್ರಂ ಲ್ಯಾಂಡರ್-ಪ್ರಜ್ಞಾನ ರೋವರ್ ಪುನಶ್ಚೇತನದ ಬಗ್ಗೆ ಇಸ್ರೋ ಹೇಳುವುದೇನು..?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement