ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ರೈತ ನಾಯಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ.
ಜಮ್ಮು ನಗರದ ನಿವಾಸಿ ಜಮ್ಮು-ಕಾಶ್ಮೀರ ಸಂಯುಕ್ತ ಕಿಸಾನ್ ರಂಗದ ಅಧ್ಯಕ್ಷ ಮೊಹಿಂದರ್ ಸಿಂಗ್ ಹಾಗೂ ಮನದೀಪ್ ಸಿಂಗ್ ಬಂಧಿತರು. ಬಂಧಿತರಿಬ್ಬರೂ ದೆಹಲಿ ಹಿಂಸಾಚಾರದ ಮುಖ್ಯ ಸೂತ್ರಧಾರರು ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಅಪರಾಧ ವಿಭಾಗದ ಪೊಲೀಸರು ಜಮ್ಮು-ಕಾಶ್ಮೀರ ಪೊಲೀಸರ ಸಹಕಾರದೊಂದಿಗೆ ಇಬ್ಬರೂ ಆರೋಪಿಗಳನ್ನು ಸೋಮವಾರ ರಾತ್ರಿ ಜಮ್ಮುವಿನಲ್ಲಿ ಬಂಧಿಸಿದ್ದಾರೆ.
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ನಿಮ್ಮ ಕಾಮೆಂಟ್ ಬರೆಯಿರಿ