ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು: ಮಾಜಿ ಸಿಎಂ ಕುಮಾರಸ್ವಾಮಿ ಆರೋಪ

posted in: ರಾಜ್ಯ | 0

ರಾಜ್ಯದಲ್ಲಿ ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಹಲವು ಜನಪ್ರತಿನಿಧಿಗಳೇ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದಾರೆ. ಚಿಕ್ಕಬಳ್ಳಾಪುರ ಗಣಿಯಲ್ಲಿ ಜಿಲೆಟಿನ್‌ ಸ್ಫೋಟಗೊಂಡಿರುವುದು ಸರಕಾರದ ಬೇಜವಾಬ್ದಾರಿತನವನ್ನು ತೋರಿಸುತ್ತದೆ. ಸರಕಾರಕ್ಕೆ ಜನರ ಜೀವದ ಬಗ್ಗೆ ಬದ್ಧತೆಯೇ ಇಲ್ಲವಾಗಿದೆ. ಪೊಲೀಸರು ಒಂದು ವಾರದ ಮುಂಚೆಯೇ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಅವರಿಗೆ ಈ ಬಗ್ಗೆ ಮೊದಲೇ ಮಾಹಿತಿ ಇತ್ತು ಎನಿಸುತ್ತಿದೆ ಎಂದರು.
ಮೈತ್ರಿ ಸರಕಾರದಲ್ಲಿ ಕಾವೇರಿ ಕಣಿವೆ ಪ್ರದೇಶದ ಯೋಜನೆಗಳಿಗೆ ೬೦೦೦ ಕೋಟಿ ರೂ. ಮೀಸಲಿಟ್ಟಿದ್ದೆ. ಆದರೆ ಬಿಜೆಪಿ ಸರಕಾರ ಅದನ್ನು ಹಿಂದಕ್ಕೆ ಪಡೆಯಿತು. ಈಗ ತಮಿಳುನಾಡಿನವರು ಕೇಂದ್ರದಿಂದ ೬೦೦೦ ಕೋಟಿ ರೂ. ಪಡೆದು ತಮ್ಮ ರಾಜ್ಯದ ಕೆರೆಗಳನ್ನು ತುಂಬಿಸಿಕೊಳ್ಳುವ ಯೋಜನೆ ಅನುಷ್ಠಾನಗೊಳಿಸಿದ್ದಾರೆ. ಇದರಿಂದ ರಾಜ್ಯದ ಬಿಜೆಪಿ ಸರಕಾರದ ಉದ್ದೇಶ ಸ್ಪಷ್ಟವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಬೆಂಗಳೂರು : ಸರಳ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಗಳ ಮದುವೆ

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement