ಮಹದಾಯಿ ನೀರು ಹಂಚಿಕೆ: ರಾಜ್ಯಕ್ಕೆ ಯಾವುದೇ ನೋಟಿಸ್‌ ಜಾರಿಯಾಗಿಲ್ಲ- ಸಚಿವ ರಮೇಶ ಜಾರಕಿಹೊಳಿ

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಯಾವುದೇ ನೋಟಿಸ್‌ ಜಾರಿಯಾಗಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ವಿವಿಧ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟಿಗೆ ಪ್ರತಿಯಾಗಿ ನವದೆಹಲಿಗೆ ತೆರಳಿದ ಸಚವ ರಮೇಶ್ ಜಾರಕಿಹೊಳಿ, ಸೋಮವಾರದ ಬೆಳವಣಿಗೆಗಳಿಗೆ ಪ್ರತಿಯಾಗಿ ಈ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕ ಮತ್ತು ಗೋವಾ ನಡುವೆ ತಲೆದೋರಿರುವ ಮಹದಾಯಿ ನದಿ ನೀರು ಹಂಚಿಕೆ ಸಂಬಂಧದ ಗೋವಾ ವಾದಕ್ಕೆ ಪ್ರತಿಯಾಗಿ ಸುಪ್ರೀಂ ಕೋರ್ಟ್ ಜಂಟಿ ಸಮಿತಿಯಿಂದ ಸ್ಥಳ ಪರಿಶೀಲನೆಗೆ ಆದೇಶಿಸಿದೆಯೇ ಹೊರತು ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ನೋಟಿಸ್ ಜಾರಿ ಮಾಡಿಲ್ಲ ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯವು ಮಹದಾಯಿ ನದಿ ನೀರನ್ನು ಮಲಪ್ರಭೆಯತ್ತ ಹರಿಸಿದ್ದು, ಇದರಿಂದ ಗೋವಾಕ್ಕೆ ನೀರು ಹರಿಯುತ್ತಿಲ್ಲ ಎಂಬ ವಾದವನ್ನು ರಾಜ್ಯ ಪರ ವಕೀಲರು ಸಮರ್ಥವಾಗಿ ಎದುರಿಸಿದ್ದಾರೆ ಎಂದು ಹೇಳಿದ್ದಾರೆ.
ಅರ್ಜಿ ವಿಚಾರಣೆ ವೇಳೆ ಉಭಯ ಪಕ್ಷಗಳ ವಾದ ಆಲಿಸಿದ ಸುಪ್ರೀಂ ಕೋರ್ಟ್ ಮೂರೂ ಅರ್ಜಿದಾರರಾದ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾಗಳಿಗೆ ತಲಾ ಓರ್ವ ಸೂಪರಿಂಟೆಂಡೆಂಟ್ ಇಂಜಿನಿಯರ್‌ಗಳನ್ನು ನೇಮಿಸುವಂತೆ ಸೂಚನೆ ನೀಡಿದ್ದು, ಈ ಮೂರೂ ಜನರು ಸ್ಥಳ ಪರಿಶೀಲನೆ ನಡೆಸಿ ಸುಪ್ರೀಂ ಕೋರ್ಟ್‌ಗೆ ಈ ಸಂಬಂಧ ವರದಿ ಸಲ್ಲಿಸುವಂತೆ ಸೂಚಿಸಿದೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement