ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಸ್ವಾಮೀಜಿಗಳ ನೇತೃತ್ವ, ಕಾಂಗ್ರೆಸ್‌ ಪ್ರಾಯೋಜಕತ್ವವಲ್ಲ

ಪಂಚಮಸಾಲಿ ೨ಎ ಮೀಸಲಾತಿ ಹೋರಾಟ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿದೆಯೇ ಹೊರತು ಕಾಂಗ್ರೆಸ್‌ ಪ್ರಾಯೋಜಕತ್ವದಲ್ಲಿ ಅಲ್ಲ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.
ಕಾಂಗ್ರೆಸ್‌ ಪ್ರಾಯೋಜಕತ್ವದಲ್ಲಿ ಹೋರಾಟ ನಡೆದಿದೆ ಎಂದು ಸಚಿವ ಮುರಗೇಶ ನಿರಾಣಿ ಹೇಳಿಕೆ ನೀಡಿರುವುದು ಸರಿಯಲ್ಲ. ಸಮಾಜದ ಒಳಿತಿಗಾಗಿ ಪಕ್ಷಾತೀತವಾಗಿ ಅನೇಕರು ಹೋರಾಟಕ್ಕೆ ಕೈಜೋಡಿಸಿದ್ದಾರೆ. ನಿರಾಣಿಯವರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದರು.
ಹಿಂದೆ ಸಚಿವ ಮುರಗೇಶ ನಿರಾಣಿಯವರೇ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿದ್ದರು. ಆದರೆ ಈಗ ಸ್ವಾಮೀಜಿಗಳ ಮೇಲೆ ಅವರು ಆರೋಪ ಮಾಡುತ್ತಿರುವುದು ಪ್ರಮಾದ. ಲಿಂಗಾಯತ ಮೀಸಲಾತಿ ಹೋರಾಟವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ. ಅಂತಹ ಕೆಲಸ ಮಾಡಬಾರದು ಎಂದು ಮನವಿ ಮಾಡಿದರು.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್​ ಪ್ರಕರಣ : ಪ್ರಮುಖ ಆರೋಪಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement