ಮುಂಬೈ: ಸುಮಾರು 80 ಕೋಟಿ ರೂ.ಗಳ ವಿದ್ಯುತ್ ಬಿಲ್ ಪಡೆದು ಆಘಾತಕ್ಕೊಳಗಾದ ನಲಸೋಪರಾದ 80 ವರ್ಷದ ವ್ಯಕ್ತಿಯನ್ನು ಅಧಿಕ ರಕ್ತದೊತ್ತಡದ ಕಾರಣಕ್ಕೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಇಂಡಿಯಾ ಟುಡೆ ವರದಿ ಪ್ರಕಾರ, ನಲಸೋಪರಾದ ನಿರ್ಮಲ್ ಗ್ರಾಮದಲ್ಲಿ ಅಕ್ಕಿ ಗಿರಣಿ ನಡೆಸುತ್ತಿರುವ ಗಣಪತ್ ನಾಯಕ್ ಹೃದಯ ರೋಗಿಯಾಗಿದ್ದು, ಸುಮಾರು ೮೦ ಕೋಟಿ ರೂ.ಗಳ ವಿದ್ಯುತ್ ಪಡೆದ ನಂತರ ಅಧಿಕ ರಕ್ತದೊತ್ತಡ ಉಂಟಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಬೇಕಾಯಿತು,
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಇದು ತಮ್ಮಿಂದಾದ ದೋಷ ಎಂದು ಮಹಾರಾಷ್ಟ್ರ ರಾಜ್ಯ ವಿದ್ಯುತ್ ವಿತರಣಾ ಕಂಪನಿ ಲಿಮಿಟೆಡ್ (ಎಂಎಸ್ಇಡಿಸಿಎಲ್) ಹೇಳಿದೆ ಮತ್ತು ಮೀಟರ್ ರೀಡಿಂಗ್ ತೆಗೆದುಕೊಳ್ಳುವ ಏಜೆನ್ಸಿಯಿಂದಾಗಿ ಈ ತಪ್ಪು ಸಂಭವಿಸಿದೆ. ಇದನ್ನು ಸರಿಪಡಿಸಲಾಗುವುದು ಎಂದು ಹೇಳಿದೆ.
ಇಂತಹ ಘಟನೆ ನಡೆದಿರುವುದು ಇದೇ ಮೊದಲಲ್ಲ. ಆಗಸ್ಟ್ 2020 ರಲ್ಲಿ 40,000 ರೂ.ಗಳ ವಿದ್ಯುತ್ ಬಿಲ್ ಪಡೆದ ನಂತರ ಖಿನ್ನತೆ ಮತ್ತು ಉದ್ವಿಗ್ನತೆ ಉಂಟಾಗಿ ನಾಗ್ಪುರದಲ್ಲಿ 57 ವರ್ಷದ ವ್ಯಕ್ತಿಯೊಬ್ಬ ತನ್ನನ್ನು ತಾನೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಎಂದು ಇಂಡಿಯಾ ಟಿವಿ ವರದಿ ಮಾಡಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ