ತೆರಿಗೆ ಸಂಗ್ರಹ, ಪಿಂಚಣಿ ಪಾವತಿ: ಖಾಸಗಿ ಬ್ಯಾಂಕ್‌ಗಳಿಗೂ ಅನುಮತಿ

ತೆರಿಗೆ ಸಂಗ್ರಹ, ಪಿಂಚಣಿ ಪಾವತಿ ಹಾಗೂ ಸಣ್ಣ ಉಳಿತಾಯದ ಯೋಜನೆಗಳಂಥ ಸರಕಾರಿ ಸಂಬಂಧಿತ ವ್ಯವಹಾರಗಳನ್ನು ನಡೆಸಲು ಖಾಸಗಿ ಬ್ಯಾಂಕ್‌ಗಳಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅನುಮತಿ ನೀಡಿದ್ದಾರೆ.
ಪ್ರಸ್ತುತ, ಕೆಲವು ದೊಡ್ಡ ಖಾಸಗಿ ವಲಯದ ಬ್ಯಾಂಕುಗಳಿಗೆ ಮಾತ್ರ ಸರ್ಕಾರಕ್ಕೆ ಸಂಬಂಧಿಸಿದ ವ್ಯವಹಾರ ನಡೆಸಲು ಅವಕಾಶವಿದೆ. ಖಾಸಗಿ ಬ್ಯಾಂಕುಗಳಿಗೆ ಸರ್ಕಾರದ ವ್ಯವಹಾರವನ್ನು ನೀಡುವಲ್ಲಿ ಇರುವ ನಿರ್ಬಂಧವನ್ನು ತೆಗೆದುಹಾಕಲಾಯಿತು. ಎಲ್ಲಾ ಬ್ಯಾಂಕುಗಳು ಈಗ ಭಾಗವಹಿಸಬಹುದು. ಖಾಸಗಿ ಬ್ಯಾಂಕುಗಳು ಈಗ ಭಾರತೀಯ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಸಮಾನ ಪಾಲುದಾರರಾಗಬಹುದು, ಸರ್ಕಾರದ ಸಾಮಾಜಿಕ ವಲಯದ ಉಪಕ್ರಮಗಳನ್ನು ಹೆಚ್ಚಿಸಬಹುದು ಮತ್ತು ಗ್ರಾಹಕರಿಗೆ ಅನುಕೂಲತೆ ಕಲ್ಪಿಸಬಹುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನಲ್ಲಿ ತಿಳಿಸಿದ್ದಾರೆ.
ಬ್ಯಾಂಕಿಂಗ್‌ನಲ್ಲಿ ಇತ್ತೀಚಿನ ತಂತ್ರಜ್ಞಾನ ಮತ್ತು ಆವಿಷ್ಕಾರಗಳನ್ನು ಅಳವಡಿಸಲು ಮತ್ತು ಕಾರ್ಯಗತಗೊಳಿಸಲು ಮುಂಚೂಣಿಯಲ್ಲಿರುವ ಖಾಸಗಿ ವಲಯದ ಬ್ಯಾಂಕುಗಳು ಈಗ ಭಾರತೀಯ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಮತ್ತು ಸರ್ಕಾರದ ಸಾಮಾಜಿಕ ವಲಯದ ಉಪಕ್ರಮಗಳನ್ನು ಹೆಚ್ಚಿಸುವಲ್ಲಿ ಸಮಾನ ಪಾಲುದಾರರಾಗಲಿವೆ ಎಂದು ತಿಳಿಸಲಾಗಿದೆ. ನಿರ್ಬಂಧವನ್ನು ತೆಗೆದುಹಾಕುವ ಮೂಲಕ, ಸರ್ಕಾರಿ ಸಂಸ್ಥೆ ವ್ಯವಹಾರ ಸೇರಿದಂತೆ ಸರ್ಕಾರಿ ವ್ಯವಹಾರಕ್ಕಾಗಿ ಖಾಸಗಿ ವಲಯದ ಬ್ಯಾಂಕುಗಳಿಗೆ (ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಹೆಚ್ಚುವರಿಯಾಗಿ) ಅಧಿಕಾರ ನೀಡಲು ಆರ್‌ಬಿಐಗೆ ಈಗ ಯಾವುದೇ ನಿರ್ಬಂಧವಿಲ್ಲ. ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಆರ್‌ಬಿಐಗೆ ತಿಳಿಸಿದೆ ಎಂದು ಸಚಿವೆ ಹೇಳಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   ಭಾರತದಲ್ಲಿ ಖಾಲಿಸ್ತಾನಿ ಪರ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement