ಫೆ.೨೬ರಂದು ಲಾರಿ ಮುಷ್ಕರ, ನಿಂತಲ್ಲೇ ನಿಲ್ಲುವ ೬ ಲಕ್ಷ ಲಾರಿಗಳು

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿಫೆ,೨೬ರಂದು ಲಾರಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕರ್ನಾಟಕ ರಾಜ್ಯ ಲಾರಿ ಮಾಲೀಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಷಣ್ಮುಗಪ್ಪ ಮಾತನಾಡಿ,ಇಂಧನ ದರ, ಟೋಲ್, ವಿಮೆ ಹೆಚ್ಚಳದಿಂದ ಟ್ರಕ್ಕಿಂಗ್ ಉದ್ಯಮದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ಎಂದರು.
ಸ್ಕ್ರಾಪಿಂಗ್ ನೀತಿ, ಇ-ವೇ ಬಿಲ್, ಹಸಿರು ತೆರಿಗೆ ಹೆಚ್ಚಳ, ಬಿಎಸ್6 ವಾಹನಗಳ ವೆಚ್ಚ, ವಾಹನಗಳ ಬಿಡಿಭಾಗಗಳ ದರ ಹೆಚ್ಚಳದಿಂದ ಸಮಸ್ಯೆಯಾಗಿದೆ.
ಫೆ.೨೬ರಂದು ಒಂದು ದಿನ ರಾಜ್ಯಾದ್ಯಂತ ಲಾರಿ ಮುಷ್ಕರ ನಡೆಸುತ್ತೇವೆ. ಮಾರ್ಚ್ 5ರಂದು ಸಭೆ ನಡೆಸಿ, ಮಾ.15ರಿಂದ ಅರ್ನಿಷ್ಟಾವ ಮುಷ್ಕರಕ್ಕೆ ಕರೆ ನೀಡಲಾಗುವುದು ಎಂದರು.
ಕೇಂದ್ರದ ಸ್ಕ್ರ್ಯಾಪ್ ನೀತಿಗೆ ನಮ್ಮ ಸಂಪೂರ್ಣ ವಿರೋಧವಿದೆ. ನಮ್ಮ ಪ್ರಾಣ ಬೇಕಾದರೂ ಕೊಡುತ್ತೇವೆ. ನಮ್ಮ ವಾಹನಗಳನ್ನು ಸ್ಕ್ರ್ಯಾಪ್‍ಗೆ ಕೊಡುವುದಿಲ್ಲ.ಕೇಂದ್ರ ಸರ್ಕಾರ ಟಾಟಾ ಮತ್ತು ಅಶೋಕ್ ಲೈಲ್ಯಾಂಡ್ ಕಂಪನಿಗಳ ಜೊತೆ ಸೇರಿಕೊಂಡು ಇಂಥ ನೀತಿಗಳನ್ನು ತರಲು ಮುಂದಾಗಿದೆ ಎಂದು ಅವರು ಆರೋಪಿಸಿದರು.
ಬೇರೆ ರಾಜ್ಯಕ್ಕೆ ಹೋಗುವ ನಮ್ಮ ಲಾರಿಗಳು ಅಲ್ಲಿ ಡೀಸೆಲ್ ಬೆಲೆ ಕಡಿಮೆ ಇರುವುದರಿಂದ ಅಲ್ಲಿ ಡೀಸೆಲ್ ಹಾಕಿಸುತ್ತಾರೆ. ಇದರಿಂದ ನಮ್ಮ ರಾಜ್ಯಕ್ಕೆ ಸುಮಾರು 1.60 ಕೋಟಿ ರೂ. ನಷ್ಟವಾಗುತ್ತದೆ. ರಾಜ್ಯದಲ್ಲಿ 11 ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹ ಅವಧಿ ಮುಗಿದರೂ ನಿರ್ವಹಣೆ ಹೆಸರಲ್ಲಿ ಸಂಗ್ರಹ ಮಾಡಲಾಗುತ್ತಿದೆ ಎಂದು ಷಣ್ಮುಗಪ್ಪ ಆರೋಪಿಸಿದರು.

ಪ್ರಮುಖ ಸುದ್ದಿ :-   ೯೦ ವರ್ಷಗಳಿಂದ ಕನ್ನಡ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಸಾಹಿತ್ಯ ಭಂಡಾರ ಪುಸ್ತಕ ಮಳಿಗೆಗೆ ಈಗ ನವೀಕರಣದ ಸಂಭ್ರಮ

ಬಿಜೆಪಿ ಆಡಳಿತದಲ್ಲಿರುವ ಬೇರೆ ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ತೆರಿಗೆ ಕಡಿಮೆ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಮಾಡಿಲ್ಲ.ರಾಜ್ಯ ಸರ್ಕಾರ 4 ರೂ. ಡೀಸೆಲ್ ಬೆಲೆ ಕಡಿಮೆ ಮಾಡಬೇಕು. ಒಂದು ಕಿ.ಮೀಗೆ 26 ರೂ. ಖರ್ಚಾಗುತ್ತದೆ. ನಾವು ಹೇಗೆ ಈ ಉದ್ಯಮವನ್ನು ನಡೆಸುವುದು ಎಂದು ಷಣ್ಮುಗಪ್ಪ ಪ್ರಶ್ನಿಸಿದರು.
ಫೆ.೨೬ರಂದು 6 ಲಕ್ಷ ಲಾರಿಗಳು ನಿಂತಲ್ಲೆ ನಿಲ್ಲಲಿವೆ ಎಂದರು.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement