ವಯಸ್ಸಿನ ಕಾರಣ: ಖ್ಯಾತ ವಕೀಲ ನಾರಿಮನ್ ಸೇವೆಯಿಂದ ನಿವೃತ್ತಿ..?

ಬೆಂಗಳೂರು: ದಶಕಗಳ ಕಾಲ ನ್ಯಾಯಾಲಯಗಳಲ್ಲಿ ಕಾವೇರಿ, ಕೃಷ್ಣಾ ಸೇರಿದಂತೆ ರಾಜ್ಯದ ಜಲ ವಿವಾದಗಳ ಬಗ್ಗೆ ಸಮರ್ಪಕವಾಗಿ ವಾದ ಮಂಡಿಸಿದ್ದ ಖ್ಯಾತ ವಕೀಲ ಪಾಲಿ ನಾರಿಮನ್ ಸೇವೆಯಿಂದ ನಿವೃತ್ತರಾಗಲಿದ್ದಾರೆ.
ತಮಗೆ ವಯಸ್ಸಾದ ಹಿನ್ನೆಲೆಯಲ್ಲಿ ನ್ಯಾಯಾಲಯಗಳಲ್ಲಿ ತಾವು ಕರ್ನಾಟಕದ ಪರ ವಾದ ಮಂಡಿಸಲು ಸಾಧ್ಯವಾಗದ ಕಾರಣ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ಬೇರೆ ವಕೀಲರನ್ನು ನೇಮಿಸಿಕೊಳ್ಳಿ ಎಂದು ನಾರಿಮನ್ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಇದೀಗ ಸರ್ಕಾರ ಪಾಲಿ ನಾರಿಮನ್ ಅವರಂತಹ ಸಮರ್ಥರನ್ನೇ ನೇಮಿಸಿಕೊಳ್ಳುವ ಅನಿವಾರ್ಯತೆ ಎದುರಾಗಿದೆ. 92 ವರ್ಷದ ನಾರಿಮನ್ ರಾಜ್ಯದ ಜಲ ವಿವಾದದಗಳನ್ನು ಸುಪ್ರೀಂಕೋರ್ಟ್‍ನಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಿದ್ದರು. ಸುಮಾರು ಮೂರು ದಶಕಗಳಿಗೂ ಹೆಚ್ಚು ಕಾಲ ಜಲವಿವಾದಗಳಿಗೆ ರಾಜ್ಯವನ್ನು ಪ್ರತಿನಿಧಿಸಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಶಿವಮೊಗ್ಗ ಕಲ್ಲು ತೂರಾಟದ ಘಟನೆ: 24 ಎಫ್‌ಐಆರ್‌ ದಾಖಲು, 60 ಮಂದಿ ಅರೆಸ್ಟ್‌

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement